ಹುಲಿಕುಂಟೆ ಗ್ರಾಮದಲ್ಲಿ ಕ್ಯಾಂಡಲ್ ಹಿಡಿದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪುಣ್ಯಸ್ಮರಣೆ
ವಿಜಯ ನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಡಾಕ್ಟರ್ ಬಿ.ಆರ್.
ಅಂಬೇಡ್ಕರ್ ಅವರ ಪುಣ್ಯ ಸ್ಮರಣೆ ದಿನದಂದು ಯುವಕರು ಕ್ಯಾಂಡಲ್ ಹಚ್ಚಿ ಸಂವಿಧಾನ ಶಿಲ್ಪಿಗೆ ಪುಸ್ಪರ್ಜನೆ ಮಾಡಿ ನಮನ ಸಲ್ಲಿಸಿದರು. ಅವರು ದೆಹಲಿಯ ತಮ್ಮ ಮನೆಯಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಇಂದು ಪುಣ್ಯಸ್ಮರಣೆ
ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಎಂದೇ ಜನಮಾನಸದಲ್ಲಿ ಗುರುತಿಸಿಕೊಂಡಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ನಾಯಕ. ಅವರು ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಭಾರತದ ಶೋಷಿತ ವರ್ಗಗಳ ಉದ್ಧಾರಕ್ಕಾಗಿ ಅನವರತ ಶ್ರಮಿಸಿದವರು. ಭಾರತದಲ್ಲಿ ದೀನದಲಿತ ಜಾತಿಗಳಿಗೆ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೀಡಿರುವ ಕೊಡಗೆ ಅಪಾರ. ಇಂದು ಅವರ ಪುಣ್ಯಸ್ಮರಣೆಯನ್ನು ಹುಲಿಕುಂಟೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳಾದ ತುಮಲೇಶ್,ಹುಚ್ಚೆಂಗೆಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಇಂದ್ರಮ್ಮ ಮಲಿಯಪ್ಪ,ಮಹಾಂತೇಶ್, ಓಬಳೇಶ್, ಅನಿಲ್, ಆಟೋ ತಿಪ್ಪೇಶ್, ಅಂಜಿನಿ.ಆರ್, ರಾಜ, ಪ್ರಹಲದ್, ಆಕಾಶ್, , ಯಲ್ಲೇಶ್, ಹುಲುಗಪ್ಪ, ಧನುಂಜಯ,ಯಶವಂತ, ಗುರುಶಂಕರ್,ಪರಶುರಾಮ , ರಮೇಶ್, ,ತಿಪ್ಪೇಸ್ವಾಮಿ.ಎನ್.ಸೋಮಣ್ಣ ಹಾಗೂ ಗ್ರಾಮದ ಮುಕಂಡರು ಹಾಗೂ ಉಪಸ್ಥಿತರಿದ್ದರು…
ವರದಿ: ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030