ಭವಿಷ್ಯ ಭಾರತದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅನನ್ಯ : ಡಾll ಶ್ರೀನಿವಾಸ್ ಎನ್ ಟಿ.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ. ರವರು ದಿನಾಂಕ 03/02/2025 ರಂದು ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ 04 ನೂತನ ಕೊಠಡಿಗಳ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು & ಯುವಕರು ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳುವ ದಿಕ್ಕಿನಲ್ಲಿ ಸಾಗಿ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಸಜ್ಜಾಗಬೇಕು. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಓದುವಂತ ವಿದ್ಯಾರ್ಥಿಗಳು ಬಡವರ ಮಕ್ಕಳಾಗಿರುವುದರಿಂದ ನಿಮ್ಮ ಭವಿಷ್ಯ ಉಜ್ವಲವಾಗಬೇಕಾದರೆ ದುಚ್ಚಟಗಳಿಂದ ದೂರವಿದ್ದು, ಸಿಕ್ಕಿರುವ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಂದೆ, ತಾಯಿ, ಗುರುಗಳಿಗೆ ವಿದೇಯರಾಗಿ ಸದಾ ಚಿಂತನಾಶೀಲರಾಗಿ, ಕ್ರಿಯಾಶೀಲರಾಗಿ ಬದುಕನ್ನು ರೂಪಿಸಿಕೊಂಡು ಪಾಲಕರ, ಊರಿನ ಕೀರ್ತಿ ಹೆಚ್ಚಿಸುವ ಮಕ್ಕಳಾಗಿ ಬೆಳೆಯಬೇಕು ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂ.ಅಧ್ಯಕ್ಷರು ಕಾವಲಿ ಶಿವಪ್ಪ ನಾಯಕ, ಪ್ರಾಚಾರ್ಯರು ಶ್ರೀಮತಿ ಕೊತ್ತಲಮ್ಮ,, ಪ್ರಭಾಕರ್, ಸುರೇಶ್, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು…
ವರದಿ. ಅನಿಲ್ ಕುಮಾರ್ ಹುಲಿಕುಂಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030