ಸಮಾಜ ಬಾಂಧವರಲ್ಲಿ,ವಿನಂತಿ, ತಮಗೆಲ್ಲ ಗೊತ್ತಿರುವ ಹಾಗೆಯೇ ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಹೋರಾಟದಲ್ಲಿ ಪಂಚಮಸಾಲಿ ಸಮಾಜದ ಹೋರಾಟವನ್ನು ಹತ್ತಿಕ್ಕಲು ನಮ್ಮ ಪಂಚಮಸಾಲಿ ಸಮಾಜದ ಮೇಲೆ ಲಾಟಿಚಾರ್ಜ್ ಮತ್ತು ದೌರ್ಜನ್ಯವನ್ನು ಮಾಡಿಸಿದ ಸರ್ಕಾರದ ಮುಖ್ಯಮಂತ್ರಿಯಾದ ಶ್ರೀ ಸಿದ್ದರಾಮಯ್ಯನವರ ಈ ನಡೆಯನ್ನು ಖಂಡಿಸಿ ದಿನಾಂಕ 12 -12 -20 24 ಗುರುವಾರ ಮುಂಜಾನೆ 10 ಗಂಟೆಗೆ ಕೂಡ್ಲಿಗಿ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಅವರ ಕಚೇರಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆಯನ್ನು ಅತೀ ಉಗ್ರವಾಗಿ ಖಂಡಿಸುವುದು ಮತ್ತು ಸಿದ್ದರಾಮಯ್ಯನ ಪ್ರತಿಕೃತಿ ದಹನ ಮಾಡುವ ಕಾರ್ಯಕ್ರಮವಿದ್ದು ಸಮಸ್ತ ಪಂಚಮಸಾಲಿ ಸಮಾಜ ಬಾಂಧವರು ಈ ಪ್ರತಿಭಟನೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಹೋರಾಟವನ್ನು ಹೊಸಹಳ್ಳಿ ಸುತ್ತಮುತ್ತಲಿನ ಪಂಚಮಸಾಲಿ ಸಮಾಜದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ತಮ್ಮಲ್ಲಿ ವಿನಂತಿ ಒಗ್ಗಟ್ಟಿನಲ್ಲಿ ಬಲವಿದೆ ಜೈ ಪಂಚಮಸಾಲಿ ಜೈ ರಾಣಿ ಚೆನ್ನಮ್ಮ.
ಹರ ಹರ ಮಹಾದೇವ್ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಮಸ್ತ ಪಂಚಮಸಾಲಿ ಸಮುದಾಯದ ಬಂಧುಗಳು ಇದ್ದರು….
ವರದಿ, ಎಂ, ಬಸವರಾಜ್, ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030