ಕೈವಲ್ಯಾಪುರ: ವೈಕುಂಠ ಏಕಾದಶಿ_ಅನಂತ ಶಯನ ದೇವಸ್ಥಾನದಲ್ಲಿ ವಿಶೇಷ ಪೂಜೆ.
-ವಿಜಯನಗರ ಜಿಲ್ಲೆ ಕೂಡ್ಲಿಗಿ: ತಾಲೂಕಿನ ಕೈವಲ್ಯಾಪುರ ಗ್ರಾಮದಲ್ಲಿರುವ, ಶ್ರೀಅನಂತಶಯನ ದೇವಸ್ಥಾನದಲ್ಲಿ. ಜ 10ರಂದು ವೈಕುಂಠ ಏಕಾದಶಿ ಪ್ರಯುಕ್ತ, ವಿಶೇಷ ಪೂಜೆ ಹೋಮ ಹವನಾದಿಗಳು ಜರುಗಿದವು. ಧಾರ್ಮಿಕ ನಿಯಮಾನುಸಾರ ತುಂಬಾ ಶ್ರದ್ಧಾ ಭಕ್ತಿಯಿಂದ ಹಾಗೂ ಸಂಭ್ರಮ ಸಡಗರದಿಂದ, ವೈಕುಂಠ ಏಕಾದಶಿಯನ್ನು ಆಚರಿಸಲಾಯಿತು. ಕೈವಲ್ಯಾಪುರ ಗ್ರಾಮದ ಭಕ್ತರು ಹಾಗೂ ನೆರೆ ಹೊರೆಯ ಗ್ರಾಮಗಳು ತಾಲೂಕಿನ ವಿವಿದೆಡೆ ಹಾಗೂ ನಾಡಿನ ಎಲ್ಲೆಡೆಗಳಿಂದ ಆಗಮಿಸಿದ್ದ, ಅಸಂಖ್ಯಾತ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ವೈಕುಂಠ ಏಕಾದಶಿ ಪ್ರಯುಕ್ತ ಜ10ರಂದು, ಕೂಡ್ಲಿಗಿಯ ವೆಂಕಟೇಶ್ವರ ದೇವಸ್ಥಾನದಲ್ಲಿ, ಗುಣಸಾಗರದ ಕೃಷ್ಣ ದೇವಸ್ಥಾನ ಸೇರಿದಂತೆ. ತಾಲೂಕಿನ ವಿವಿದೆಡೆಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ, ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಅನಂತಶಯನ ಸ್ವಾಮಿಯ ಅಸಂಖ್ಯಾತ ಭಕ್ತರಿಗೆ ದರ್ಶನ ಸುಲಲಿತವಾಗಲೆಂದು, ದೇವಸ್ಥಾನದ ಮುಖ್ಯದ್ವಾರದಲ್ಲಿ ಅನಂತ ಶಯನ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಉತ್ಸವ ಮೂರ್ತಿಯನ್ನು ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ತಾಲೂಕಿನೆಲ್ಲೆಡೆಗಳಲ್ಲಿ ವೈಕುಂಠ ಏಕಾದಶಿಯನ್ನು, ತುಂಬಾ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
*ತಾಲೂಕಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ*-ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು,
ತಾಲೂಕು ನೆರೆ ಹೊರೆ ತಾಲೂಕು ಸೇರಿದಂತೆ ಜಿಲ್ಲೆ ಹಾಗೂ ನಾಡಿನ ವಿವಿದೆಡೆಗಳಿಂದ ನೂರಾರು ಭಕ್ತರು ದೇವರ ದರ್ಶನಕ್ಕಾಗಿ ಅಗಮಿಸಿದ್ದರು. ಮುಂಜಾನೆಯಿಂದಲೇ ಸಾಗರೋಪಾದಿಯಲ್ಲಿ ಸಾವಿರಾರು ಭಕ್ತರು, ಅನಂತ ಶಯನ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದರು. ದೇವಸ್ಥಾನದಲ್ಲಿ ಸರತಿ ಸಾಲಿನಲ್ಲಿ ನಿಂತು, ವೈಕುಂಠ ವಾಸ ಅನಂತ ಶಯನ ದೇವರ ದರ್ಶನ ಪಡೆದರು. ಹೋಮ ಹವನಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಾಕಾರೋತ್ಸವ ನೆರವೇರಿದವು. ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು, ಹಾಗೆಯೇ ದೇವರ ಮೂರ್ತಿಗಳಿಗೂ ವೈಭವೋಪೇತ ಅಲಂಕಾರ ಮಾಡಲಾಗಿತ್ತು, ಭಕ್ತರ ದರ್ಶನಕ್ಕಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಸೇವಾ ಸಮಿತಿ ಪದಾಧಿಕಾರಿಗಳು, ಹಾಗೂ ಗ್ರಾಮದ ಹಿರಿಯರು ವಿವಿದ ಸಮುದಾಯಗಳ ಮುಖಂಡರು ಅಸಂಖ್ಯಾತ ಭಕ್ತರು ಭಾಗಿಯಾಗಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030