ಭದ್ರಾ ಮೇಲ್ದಂಡೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಲಿ: ಡಾll ಶ್ರೀನಿವಾಸ್ ಎನ್ ಟಿ…
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ದಿನಾಂಕ 15.03.2025 ರಂದು ಜಗಳೂರು ತಾಲೂಕು ಶ್ರೀ ಶರಣಬಸವೇಶ್ವರ ದಾಸೋಹ ಮಠ , ದೊಣೆಹಳ್ಳಿ ದಾಸೋಹ ಸಂಸ್ಕೃತಿ ಉತ್ಸವ ಹಾಗೂ ಸಮಗ್ರ ನೀರಾವರಿಗಾಗಿ ರೈತರ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ 650 ಮೀಟರ್ ಮಾತ್ರ ಬಾಕಿ ಇದೆ. ಕ್ಷೇತ್ರಕ್ಕೆ ದೊಡ್ಡ ದೊಡ್ಡ ಯೋಜನೆಗಳಾದ ಕೃಷಿ ವಿಜ್ಞಾನ ಸಂಶೋಧನೆ ಕಾಲೇಜ್, ಹುಣಸೆ ಸಂಸ್ಕರಣ ಘಟಕ, ಶೈಕ್ಷಣಿಕ ಸುಧಾರಣೆಗಾಗಿ ನೂತನ ವಿದ್ಯಾರ್ಥಿ ನಿಲಯ , ಕಿತ್ತೂರಾಣಿ ಚೆನ್ನಮ್ಮ ವಸತಿ ಕಾಲೇಜ್ ಮಂಜೂರು, ಶಾಲಾ ಕೊಠಡಿಗಳ ನಿರ್ಮಾಣ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಶಾಸಕನಾಗಿ 2 ವರ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದ್ದರಿಂದ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24 ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ಅನುದಾನ ಘೋಷಿಸಿತ್ತು. ಆದರೆ ಈವರೆಗೂ ಅನುದಾನ ಬಿಡುಗಡೆಯಾಗಿರುವುದಿಲ್ಲ ಆದ್ದರಿಂದ ಕೇಂದ್ರ ಸರ್ಕಾರ ಸಮಗ್ರ ನೀರಾವರಿಗಾಗಿ ವಿಶೇಷ ಅನುದಾನ ನೀಡಬೇಕು.ನಾನು ಬದ್ಧತೆಯಿಂದ ರೈತರ ಪರವಾಗಿ ಕೆಲಸ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಶ್ರೀ ಮು.ರಾ.ಮಠದ ಆಡಳಿತ ಸದಸ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಗಳು ,ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿಗಳು ಹಾಗೂ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿಯವರು, ಬಿ.ದೇವೇಂದ್ರಪ್ಪ ರವರು, ಮಾಜಿ ಶಾಸಕರಾದ ಶ್ರೀ ಎಚ್. ಪಿ.ರಾಜೇಶ್, ಶ್ರೀ ರಾಮಚಂದ್ರಪ್ಪ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030