ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರು ದಿನಾಂಕ 19/4/2025 ರಂದು ಬಯಲು ತುಂಬರಗುದ್ದಿ ಗ್ರಾಮದ ಅಂಗನವಾಡಿ ಕೇಂದ್ರ ನೂತನ ಕಟ್ಟಡ ಉದ್ಘಾಟನೆ ಮತ್ತು ಪ್ರೌಢಶಾಲೆಯ ಕಾಂಪೌಂಡ್ ಮತ್ತು ಉನ್ನತೀಕರಣ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಪೂರ್ವ ಬಾಲ್ಯ ವ್ಯವಸ್ಥೆಯ ಮಕ್ಕಳಿಗಾಗಿ ಅಂಗನವಾಡಿ ನೂತನ ಕೇಂದ್ರ ನಿರ್ಮಿಸಲಾಗಿದೆ. ಸಣ್ಣ ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಸುತ್ತಲೂ ಕಾಂಪೌಂಡ್ & ಸಿಸಿ ರಸ್ತೆ ತುಂಬಾ ಅವಶ್ಯಕತೆ ಇರುವುದರಿಂದ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಅಡಿಯಲ್ಲಿ ನಾಳೆಯೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ದಿನ ಹೊಸಹಳ್ಳಿ ಗ್ರಾಮದಿಂದ ರಂಗನಾಥನಹಳ್ಳಿ ವರೆಗೆ 6 ಕೋಟಿ ಅನುದಾನದಲ್ಲಿ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನದಲ್ಲಿ ನಿಮ್ಮೂರಿನಿಂದ ಉಜ್ಜಿನಿವರೆಗೂ ಸುಸರ್ಜಿತ ರಸ್ತೆ ನಿರ್ಮಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು & ಉಪಾಧ್ಯಕ್ಷರು, ಸದಸ್ಯರುಗಳು & ಗ್ರಾಮದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು…
ವರದಿ. ಎಂ ಬಸವರಾಜ್ ಕಕ್ಕುಪ್ಪಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030