ಗಡಿಗ್ರಾಮಗಳ ರಸ್ತೆಗಳ ಸಾಮಾಜಿಕ ಸುಧಾರಣೆಗೆ ಒತ್ತು ನೀಡಿದ ಶಾಸಕ – ಡಾ. ಶ್ರೀನಿವಾಸ್. ಎನ್.ಟಿ…!!!

Listen to this article

ಗಡಿಗ್ರಾಮಗಳ ರಸ್ತೆಗಳ ಸಾಮಾಜಿಕ ಸುಧಾರಣೆಗೆ ಒತ್ತು ನೀಡಿದ ಶಾಸಕ – ಡಾ. ಶ್ರೀನಿವಾಸ್. ಎನ್.ಟಿ.

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿನಾಂಕ; 28-06-2025 ರಂದು ಹೂಡೇಂ ಗ್ರಾಮ ದಿಂದ ಶ್ರೀ ಗಾಣಗಟ್ಲೆ ಕೆರೆ ಮಾಯಮ್ಮ ದೇವಸ್ಥಾನದವರೆಗೆ ಸಿ.ಸಿ. ರಸ್ತೆ ( 1 ಕೋಟಿ) ಯ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಾ, ಇಲ್ಲಿನ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಮನವಿ ಮಾಡಿಕೊಂಡಿದ್ದರು. ಆ ನಿಟ್ಟಿನಲ್ಲಿ, ಗಡಿ ಗ್ರಾಮಗಳ ರಸ್ತೆಗಳ ಸಾಮಾಜಿಕ ಸುಧಾರಣೆಗೆ ಒತ್ತು ಕೊಡಲು ಸರ್ಕಾರದ ಉನ್ನತ ಮಟ್ಟದಲ್ಲಿ ಶ್ರಮವಹಿಸಿ ಅನುದಾನ ತಂದು ಇಲ್ಲಿನ ಭಕ್ತರ ಭಾವನೆಗಳನ್ನು ಗೌರವಿಸುವುದಕ್ಕಾಗಿ ಎಲ್ಲರ ಸಹಕಾರದಿಂದ ಒಳಿತನ್ನೂ ಮಾಡಲಿದ್ದೇವೆ ಎಂದರು. ಹಾಗೆಯೇ, ಮುಂದಿನ ದಿನಗಳಲ್ಲಿ ಇಲ್ಲಿನ ಕೆರೆಯನ್ನು ಅಭಿವೃದ್ಧಿ ಪಡಿಸಲಿದ್ದೇವೆ ಎಂದೂ ನಮ್ಮ ಮಾನ್ಯ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು ಮಾಜಿ ಅಧ್ಯಕ್ಷರುಗಳು ಗ್ರಾಮ ಪಂಚಾಯತಿ ಸದಸ್ಯರು ಮಾಜಿ ಸದಸ್ಯರು ಮುಖಂಡರು ಸಾರ್ವಜನಿಕರು ಮಹಿಳೆಯರು ಯುವಕರು ಭಕ್ತಾದಿಗಳು ಉಪಸಿತರಿದ್ದರು.

ವರದಿ: ಅನಿಲ್ ಕುಮಾರ್ ಹುಲಿಕುಂಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend