ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅರ್ಥಪೂರ್ಣ ಆಚರಣೆ…!!!

ಪೂರ್ವಸಿದ್ಧತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್
ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅರ್ಥಪೂರ್ಣ ಆಚರಣೆ
ಚಿತ್ರದುರ್ಗ:ಜಿಲ್ಲಾ ಕೇಂದ್ರದಲ್ಲಿ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸಮಾಜದ ಮುಖಂಡರ ಸಮ್ಮತಿಯಂತೆ ಅಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಸರ್ಕಾರದ ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಅಂಗವಾಗಿ ಗೀತ ಗಾಯನ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವೀರಶೈವ ಸಮಾಜ ಕಾರ್ಯದರ್ಶಿ ವೀರೇಂದ್ರ ಕುಮಾರ್, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಗಂಗಾಧರಪ್ಪ, ಮಾಜಿ ಅಧ್ಯಕ್ಷೆ ಮೋಕ್ಷ ರುದ್ರಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು…

Leave a Reply

Your email address will not be published. Required fields are marked *