ಡಾಕ್ಟರ್ ಬಿ ಆರ್ ಅಂಬೇಡ್ಕರ್ 134 ನೇ ಜಯಂತೋತ್ಸವ
ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಏಪ್ರಿಲ್ 14 ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ರವರ ಹುಟ್ಟುಹಬ್ಬ ಹುಲಿಕುಂಟೆ ಗ್ರಾಮದಲ್ಲಿ ಸಂವಿಧಾನ ಕತೃ ಡಾ ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ನಾಮ ಫಲಕಕ್ಕೆ ಹೂವಿನ ಹಾರ ಹಣ್ಣು ಕಾಯಿಯನ್ನಿಟ್ಟು ಪೂಜಾ ಕಾರ್ಯಕ್ರಮ ಮಾಡಿ ಸಿಹಿ ಹಂಚಿ ಆಚರಿಸಲಾಯಿತು
ಸಂವಿಧಾನ ರಚಿಸಿ, ದೇಶಕ್ಕೆ ಭದ್ರ ಬುನಾದಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಸಂಘರ್ಷದ ಅನುಭವದಿಂದಲೇ ಹುಟ್ಟಿಕೊಂಡ ಮಾಹಾನ್ ಚೇತನ. ಡಾ. ಬಿ.ಆರ್ ಅಂಬೇಡ್ಕರ್ ಎಂದು ಶಾಲಾ ಮುಖ್ಯ ಗುರುಗಳಾದ ಜೆಎಂ ವಾಸುರಾಮ್ ನಾಯಕ್ ಮತ್ತು ಸಹ ಶಿಕ್ಷಕರಾದ ಅಂಜಿನಪ್ಪ ಈ ಸಂದರ್ಭದಲ್ಲಿ ಮಾತನಾಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ದಲಿತ ಯುವ ಮುಖಂಡರು, ಹಾಗೂ ಊರಿನ ಮುಖಂಡರು ಹಾಗೂ ಶಾಲಾ ಶಿಕ್ಷಕರು ಭಾಗವಹಿಸಿದ್ದರು..
ವರದಿ:- ಅನಿಲ್ ಕುಮಾರ್ ಹುಲಿಕುಂಟೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030