ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು…!!!

ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೀಜಗಳು 1,81,595 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಖ್ಯ ಹಿಂಗಾರು ಬೆಳೆ ಆಗಿರುವ ಕಡಲೆಯಲ್ಲಿ ಅಲ್ಲಲ್ಲಿ ಸೊರಗು ರೋಗದ ಬಾಧೆ ಕಂಡು ಬರುತ್ತಿದ್ದು, ಪ್ರಾರಂಭದಲ್ಲಿ ಸ್ಥಾನಿಕವಾಗಿ 1 ಅಥವಾ 2 ಗಿಡಗಳಲ್ಲಿ ಕಂಡುಬಂದು ನಂತರ ಸಂಪೂರ್ಣ ಹೊಲವು ಬಾಧೆಗೆ ಒಳಪಡುವ ಸಾಧ್ಯತೆಯಿರುವುದು. ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.

ಕಡಲೆಯಲ್ಲಿ ಸೊರಗು ರೋಗ ನಿರ್ವಹಣೆ: ಪ್ರತಿ ವರ್ಷ ಪದೇಪದೇ ಅದೇ ಕ್ಷೇತ್ರದಲ್ಲಿ ಕಡಲೆ ಬೆಳೆಯನ್ನು ಅಥವಾ ಮುಂಗಾರಿನಲ್ಲಿ ದ್ವಿದಳ ಧಾನ್ಯ ಬೆಳೆದು ಹಿಂಗಾರಿನಲ್ಲಿ ಕಡಲೆ ಬೆಳೆಯುವುದರಿಂದ ಸೊರಗು ರೋಗದ ಬಾಧೆ ಹೆಚ್ಚಾಗುತ್ತದೆ ಆದ್ದರಿಂದ ಬೆಳೆ ಪರಿರ್ವತನೆ ಅವಶ್ಯ. ಸೊರಗು ರೋಗ ಬಾಧೆಗೊಳಗಾದ ಸಸಿಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಕಿತ್ತು ನಾಶಪಡಿಸಬೇಕು ನಂತರ ರೋಗ ಹರಡದಂತೆ ಸಂಯುಕ್ತ ಶಿಲೀಂಧ್ರನಾಶಕ (ಶೇ 37.5 ಕಾರ್ಬಕ್ಸಿನ್ + ಶೇ 37.5 ಥೈರಾಮ್ ಡಬ್ಲೂ.ಎಸ್.)ವನ್ನು 2 ಗ್ರಾಂ ಪ್ರತಿ ಲೀಟರ್‍ಗೆ ನೀರಿಗೆ ಬೆರಸಿ ಬಾಧಿತ ಸಸಿಗಳ ಸುತ್ತಮುತ್ತ ಬೇರುಗಳಿಗೆ ಉಣಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *