76ನೇ ಗಣರಾಜ್ಯೋತ್ಸವ ಆಚರಣೆ; ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳುವಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ…!!!

Listen to this article

76ನೇ ಗಣರಾಜ್ಯೋತ್ಸವ ಆಚರಣೆ; ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳುವಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ:ಜಿಲ್ಲಾ ಕೇಂದ್ರದಲ್ಲಿ ಜನವರಿ 26ರಂದು ನಡೆಯುವ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26ರಂದು ಬೆಳಿಗ್ಗೆ 9ಕ್ಕೆ ನಗರದ ವಿಮ್ಸ್ ಮೈದಾನದಲ್ಲಿ ಮೈದಾನದಲ್ಲಿ ಆಚರಿಸಲಾಗುವುದು. ಶಿಷ್ಠಾಚಾರದ ನಿಯಮಗಳಂತೆ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಗಣರಾಜ್ಯೋತ್ಸವ ಆಚರಣೆಗೆ ಸಂಬoಧಿಸಿದoತೆ ಸ್ವಾಗತ, ಶಿಷ್ಠಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವಿಮ್ಸ್ ಮೈದಾನ ಆವರಣವನ್ನು ಸ್ವಚ್ಛಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗಣ್ಯರು ಕುಳಿತುಕೊಳ್ಳುವುದಕ್ಕೆ ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.
ಪೆರೇಡ್ ವ್ಯವಸ್ಥೆ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕರ್ಷಣಿಯವಾಗಿ ದೇಶಭಕ್ತಿ ಬಿಂಬಿಸುವ ಕನ್ನಡ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅಂದು ಸಂಜೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದಲ್ಲಿ ದೇಶಪ್ರೇಮ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಬಿ.ನಾಗರಾಜ ಅವರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend