ಗೂಗಲ್ ಮ್ಯಾಪ್ ನಂಬಿ ಖಾನಾಪುರದ ದಟ್ಟ ಅರಣ್ಯದಲ್ಲೇ ರಾತ್ರಿ ಕಳೆದ ಬಿಹಾರ ಕುಟುಂಬ.!!

Listen to this article

ಗೂಗಲ್ ಮ್ಯಾಪ್ ನಂಬಿ ಖಾನಾಪುರದ ದಟ್ಟ ಅರಣ್ಯದಲ್ಲೇ ರಾತ್ರಿ ಕಳೆದ ಬಿಹಾರ ಕುಟುಂಬ.!

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.

ರಸ್ತೆ ತಿಳಿಯದೆ ಗೂಗಲ್ ಮ್ಯಾಪ್ ನಂಬಿದ್ದಕ್ಕೆ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾಔಇ ಜಿಲ್ಲೆಯ ಖಾನಾಪುರ  ದಲ್ಲಿ ನಡೆದಿದೆ.

ಬಿಹಾರದ ರಾಜದಾಸ್ ರಣಜಿತ್ ದಾಸ್ ಕುಟುಂಬ  ಉಜ್ಜಯಿನಿಯಿಂದ ಗೋವಾ  ಪ್ರವಾಸಕ್ಕೆ ಹೊರಟಿತ್ತು. ಗೋವಾದಲ್ಲಿ ತಲುಪಬೇಕಿದ್ದ ಸ್ಥಳದ ಲೊಕೇಶನ್  ಹಾಕಿ ಪ್ರಯಾಣ ಬೆಳೆಸಿದ್ದರು.

ಗೂಗಲ್ ಮ್ಯಾಪ್ ಪ್ರಕಾರವೇ ಹೋಗುತ್ತಿದ್ದ ಅವರು ದಾರಿ ಸಾಗಿದಂತೆ ಶಿರೋಲಿ ಮತ್ತು ಹೆಮ್ಮಡಗಾ  ಮಾರ್ಗ ಮಧ್ಯದ ಮುಖ್ಯ ರಸ್ತೆಯಿಂದ 7-8 ಕಿಮೀ ಒಳಗೆ ಭೀಮಗಡ ವನ್ಯಧಾಮದ ಅರಣ್ಯ  ದೊಳಗೆ ಹೊಕ್ಕಿದ್ದಾರೆ. ಕಗ್ಗತ್ತಲ ಕಾಡಿನಲ್ಲಿ ಮೊಬೈಲ್ ನೆಟ್‌ವರ್ಕ್  ಸಿಗದೇ ದಟ್ಟ ಅರಣ್ಯದಲ್ಲಿ ಹಾದಿ ತಪ್ಪಿ ಕುಟುಂಬ ಸಿಲುಕಿಕೊಂಡಿದೆ.

ದಟ್ಟ ಅರಣ್ಯ  ದಲ್ಲಿ ಹಾದಿ ತಪ್ಪಿದರೂ ಕಂಗೆಡದ ರಾಜದಾಸ್ ಕುಟುಂಬದ ಎಲ್ಲ ಸದಸ್ಯರಿಗೆ ಧೈರ್ಯ ತುಂಬಿ ರಾತ್ರಿ  ಅಲ್ಲೇ ಕಳೆದಿದ್ದಾರೆ. ಜೀವ ಕೈಯಲ್ಲಿ ಹಿಡಿದು ರಾತ್ರಿ ಕಳೆದ ಕುಟುಂಬ, ಬೆಳಗಾಗುತ್ತಲೇ ತಾವಿದ್ದ ಸ್ಥಳದಿಂದ ಮೂರ್ನಾಲ್ಕು ಕಿಲೋಮೀಟರ್ ಕ್ರಮಿಸಿ, ಮೊಬೈಲ್ ನೆಟ್‌ವರ್ಕ್ ದೊರೆತ ಬಳಿಕ ಅವರು 100 ಸಂಖ್ಯೆಗೆ ಕರೆ ಮಾಡಿ ಪೊಲೀಸ್ ಕಂಟ್ರೋಲ್ ರೂಂ  ಜತೆ ಸಂಪರ್ಕ ಸಾಧಿಸಿ ವಿಚಾರ ಹೇಳಿದ್ದಾರೆ.

ತಕ್ಷಣ ಕುಟುಂಬದ ಸಹಾಯಕ್ಕೆ ನೆರವಾದ ಖಾನಾಪುರ ಪೊಲೀಸರು  ಕುಟುಂಬವನ್ನು ರಕ್ಷಿಸಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend