ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಆನಂದ್ ಎಂ…!!!

Listen to this article

ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಆನಂದ್ ಎಂ

ಮದ್ಯ ಮತ್ತು‌ ಮಾದಕ ವಸ್ತುಗಳ ಸೇವನೆಯಿಂದ ಯುವ ಜನರು ದೂರವಿದ್ದು, ಆರೋಗ್ಯಯುತ ಸಮಾಜ ನಿರ್ಮಾಣದ ಜೊತೆಗೆ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಅವರು ತಿಳಿಸಿದರು.

ಅವರು ಇಂದು ಮಂಡ್ಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾನೂನು‌ ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಮಂಡ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಗುರುವಿನ ಮೇಲೆ ಭಕ್ತಿ ಇಲ್ಲದಿದ್ದರೆ ನಿಮ್ಮ ಬಳಿ ಏಷ್ಟೇ ವಿದ್ವತ್ ಇದ್ದರು ಫಲವಿಲ್ಲ ಎಂದು ಹೇಳಿದರು.

ಭಾರತ ಯುವ ಸಮೂಹ ಮತ್ತು ಯುವಶಕ್ತಿ ಹೊಂದಿರುವ ದೇಶ, ದೇಶವನ್ನು ಅಭಿವೃದ್ಧಿಯತ್ತ ಕರೆದೊಯ್ಯುವ ಜವಾಬ್ದಾರಿ ಯುವ ಜನತೆಯ ಮೇಲಿದೆ, ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಕುಟುಂಬ ಕಲ್ಯಾಣ ಹಾಗೂ ಸಾಮಾಜಿಕ ಏಳಿಗೆಗಾಗಿ ಶ್ರಮಿಸಬೇಕಿದೆ, ಭಾರತದ ಸಂವಿಧಾನದ ಆಶಯಗಳನ್ನು ನಮ್ಮಲ್ಲಿ ಅಳವಡಿಸಿಕೊಂಡು ಮುಂದೆ ಸಾಗೋಣ ಎಂದು ತಿಳಿಸಿದರು.

ದುಶ್ಚಟಗಳಿಂದ ಕೇವಲ ನಾವು ದೂರ ಇದ್ದರೆ ಸಾಲದು ನಮ್ಮ ಸುತ್ತ ಮುತ್ತ ಇರುವ ಜನರಿಗೆ ಮದ್ಯ ವ್ಯಸನದಿಂದ ಉಂಟಾಗುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೂ ಜಾಗೃತಿ ಮೂಡಿಸಬೇಕು, ದುಶ್ಚಟಗಳಿಂದ ದೂರ ಉಳಿದಾಗ ವೈಯಕ್ತಿಕ ಅಭಿವೃದ್ಧಿ ಕಾಣಬಹುದು ಇದರಿಂದ ಕುಟುಂಬ ಅಭಿವೃದ್ಧಿಗೊಳ್ಳುತ್ತದೆ ಜೋತೆ ದೇಶದ ಅಭಿವೃದ್ಧಿಗೂ ಸಹಕಾರಿಸಿದಂತಾಗುತ್ತದೆ, ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರು ಸಾಮಾಜಿಕ ಹೊಣೆಗಾರಿಕೆಯನ್ನು ಪಾಲಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡ್ಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಕೆ. ಶಿವಚಿತ್ತಪ್ಪ ಮಾತನಾಡಿ ವಿದ್ಯಾರ್ಥಿಗಳು ಮದ್ಯ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರಬೇಕು, ಇತ್ತಿಚಿನ ದಿನಗಳಲ್ಲಿ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಯುವ ಸಮೂಹಕ್ಕೆ ತನ್ನದೇ ಆದ ಜವಾಬ್ದಾರಿಗಳಿವೆ ಕ್ಷಣದ ಸಂತೋಷಕ್ಕಾಗಿ ಜೀವನದ ಸಂತೋಷ ಹಾಳು ಮಾಡಿಕೊಳ್ಳದಿರಿ ಎಂದು ಹೇಳಿದರು.

ಉತ್ತಮ ಆರೋಗ್ಯಕರ ಜೀವನಕ್ಕಾಗಿ ಪುಸ್ತಕಗಳನ್ನು ಓದುವುದು, ವ್ಯಾಯಾಮ ಮಾಡುವುದು,ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಈಗೆ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಸುಧಾರಿತ ಬದುಕನ್ನು ಕಟ್ಟಿಕೊಳ್ಳಬಹುದು, ಜೋತೆಗೆ ವೈಯಕ್ತಿಕ ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಿ ಎಂದು ತಿಳಿ ಹೇಳಿದರು.

ನಂತರ ಮಾತನಾಡಿದ ಮಿಮ್ಸ್ ನಾ ಮನೋ ರೋಗ ತಜ್ಞರಾದ ಡಾ.ಮೇಜರ್ ಕುಮಾರ್ ಅವರು ಮಾತನಾಡಿ ದುಶ್ಚಟಗಳು ವ್ಯಕ್ತಿಯ ಕೂತುಹಲದಿಂದ ಉಂಟಾಗಬಹುದು ಅಥವಾ ನಮ್ಮ ಸುತ್ತ ಮುತ್ತಲಿನ ಪರಿಸರದ ಪ್ರಭಾವದಿಂದ ಉಂಟಾಗುವ ಸಾಧ್ಯತೆ ಇದೆ, ಕೆಲವೂಮ್ಮೆ ಅನುವಂಶೀಯತೆ ಇಂದಲ್ಲೂ ಉಂಟಾಗಬಹುದು ಅದರಲ್ಲೂ ಯೌವನ ಹಂತದಲ್ಲಿ ಇವರುವವರು ವೇಗವಾಗಿ ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚು ಇರುತ್ತದೆ ಎಂದು ತಿಳಿಸಿದರು.

ದುಶ್ಚಟಗಳಿಂದ ಹೊರಬರಲು ಆದರ್ಶ ವ್ಯಕ್ತಿಗಳ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ, ಉತ್ತಮ ಪರಿಸರದಲ್ಲಿ ಹೆಚ್ಚು ಕಾಲ ಕಳೆಯಿರಿ, ಉತ್ತಮ ಸ್ನೇಹಿತರ ಸಂಪರ್ಕ ಬೆಳೆಸಿಕೊಳ್ಳಿ ಸದಾ ಕ್ರಿಯಾಶೀಲವಾಗಿರಿ ಇದರಿಂದ ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರ ಉಳಿಯಬಹುದು ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನಃಶಾಸ್ತ್ರ ತಜ್ಞ ಮಹಮದ್ ಸೋಹಿಲ್ ಮಾತನಾಡಿ ವ್ಯಾಸನ ಮುಕ್ತವಾಗಿರಲು ಅರಿವು ಮುಖ್ಯವಾಗಿರುತ್ತದೆ, ದುಶ್ಚಟಗಳಿಗೆ ಬಲಿಯಾಗುವ ಮೊದಲು ಅಂತಹ ಅಭ್ಯಾಸಗಳಿಂದ ದೂರ ಇರುವುದು ಉತ್ತಮ, ದುಶ್ಚಟಗಳಿಂದ ಅಪಾಯ ಮತ್ತು ಹಾನಿಯ ಸಂಭವ ಹೆಚ್ಚು, ದುಶ್ಚಟಗಳಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಬದಲಿಗೆ ಸಮಸ್ಯೆ ಉಲ್ಬಣಗೊಳ್ಳುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಯೋಗಾನರಸಿಂಹಚಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ . ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿ ತಿಮ್ಮರಾಜು, ನಿರೂಪಕಿ ಅನುಪಮ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend