101ಸಸಿ ನೆಡುವ ಮೂಲಕ ಬಿ.ವೈ.ವಿಜಯೇಂದ್ರಣ್ಣ ಅವರ 50ನೇ ವರ್ಷದ ಹುಟ್ಟುಹಬ್ಬ ಆಚರಣೆ..
ರಾಯಚೂರು
ಇಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಯೆಡಿಯೂರಪ್ಪನವರ ಹುಟ್ಟು ಹಬ್ಬದ ಅಂಗವಾಗಿ 101 ಸಸಿಗಳನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ರಾಯಚೂರು ನಗರದ ಜನಪ್ರಿಯ ಶಾಸಕರಾದ ಡಾ:ಶಿವರಾಜ್ ಪಾಟೀಲ್ ಅವರು ಮಾತನಾಡಿ ವಿಜಯೇಂದ್ರ ಯಡಿಯೂರಪ್ಪನವರಿಗೆ ಜನುಮದಿನದ ಶುಭಾಶಯ ತಿಳಿಸುತ್ತಾ ಅವರಿಗೆ ಆರೋಗ್ಯ ಆಯಸ್ಸು ಕೊಟ್ಟು ಇನ್ನೂ ಅನೇಕ ಜನಪರ ಕೆಲಸಗಳನ್ನು ಮಾಡಲಿ ಹಾಗೂ ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದು ಆಶಿಸಿದರು ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಜಯೇಂದ್ರಣ್ಣ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಶ್ರೀ ವಿನೋದ್ ಗೌಡ ಚಾಗಲ್ ಅವರ ನೇತೃತ್ವದಲ್ಲಿ 101 ಸಸಿಗಳನ್ನು ನೇಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಎಸ್. ರಾಮು ವಕೀಲರು, ಉಪಾಧ್ಯಕ್ಷರಾದ ಮಂಜುನಾಥ್ ಪಾಟೀಲ್ ಎಕ್ಲಾಸ್ ಪುರ್, ನಾಗರಾಜ ಗೌಡ ರಾಜೊಳ್ಳಿ, ಕಾರ್ಯದರ್ಶಿಗಳಾದ ಶಂಕರಗೌಡ ಜಾಲಿಬೆಂಚಿ, ನಾಗರಾಜು ಪಾಟೀಲ್
ನಿರಂಜನ್ ನಾಯಕ್ ಪೊಲೀಸ್ ಪಾಟೀಲ್, ನವೀನ್ ಪಂಪನಗೌಡ, ಗಿರೀಶ್ ವಕೀಲರು, ರವಿ ಪಾಟೀಲ್ ಹಾಗೂ ಬಿಜೆಪಿ ಯುವ ಮುಖಂಡರಾದ ಶ್ರೀಧರ್ ಕರಿಪೇಲಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030