ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ
ಪತ್ರಿಕಾ ಹೇಳಿಕೆ
ಸುಪ್ರೀಂಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿಸೆಂಬರ್ 16 ರಂದು ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನೆಡಸಲಾಗುವುದು .
ಆಗಸ್ಟ್ 1 ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು . ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕದ ಸರ್ಕಾರ ಅಮೆಗತಿಯಲ್ಲಿ ಸಾಗಿದೆ . ಕಾಟಾಚಾರಕ್ಕೆ ನ್ಯಾ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ , 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು . ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ , ಆಯೋಗಕ್ಕೆ ಬೇಕಾದ ಕಛೇರಿ , ಸಿಬ್ಬಂದಿ , ಹಣಕಾಸಿನ ನೆರವುಕೊಡದೆ ಕಾಲಾಹರಣ ನೆಡೆಸಲಾಗುತ್ತಿದೆ . ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ , ಸರಕಾರದ ಮುಂದೆ ನ್ಯಾ ಸದಾಶಿವ ಆಯೋಗ , ಮಾಧುಸ್ವಾಮಿ ಸಮಿತಿ ವರದಿ ಇದೆ . ಮಾಧುಸ್ವಾಮಿ ಯವರ ಸಮಿತಿ ಏಕೆ , ಏಡಿ ಸಮಸ್ಯೆಗೆ ಪರಿಹಾರಒದಗಿಸಿದೆ , 2011ರ ಜನಗಣತಿಯ ಅಂಕಿಅಂಶಗಳ ಅಧಾರದಲ್ಲಿ ವರ್ಗೀಕರಣ ಮಾಡಿದೆ . ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ . ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ .
ಒಳಮೀಸಲಾತಿ ಜಾರಿ ಆಗುವ ವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು . ಆದರೆ ಈ ಭರವಸೆ ಜಾರಿಯಾಗಿಲ್ಲ , ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ . ಇದು ಖಂಡನಾರ್ಹ .
ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಇದೇ ಡಿ 16 ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆಕೊಡಲಾಗಿದೆ .
ಬೆಳಗಾವಿ ಸಮಾವೇಶದ ಮೊದಲು ರಾಜ್ಯದ ಎಲ್ಲ ಶಾಸಕರ ಮನೆಯಮುಂದೆ ಡಿಸೆಂಬರ್ 14 ರಂದು ಶನಿವಾರ ತಮಟೆ ಚಳವಳಿ ನೆಡಸಿ ವಿಧಾನಸೌಧದಲ್ಲಿ ಒಳಮೀಸಲಾತಿಯ ಪರವಾಗಿ ಧ್ವನಿ ಎತ್ತಲು ಆಗ್ರಹಿಸಲಾಗುವುದು .
ಹರಿಯಾಣದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟಿನ ತೀರ್ಪು ಬಂದ ಮೊದಲವಾರದಲ್ಲೆ ಒಳಮೀಸಲಾತಿಯನ್ನು ಜಾರಿಮಾಡಿದೆ . ಆದರೆ ಕರ್ನಾಟಕದ ಕಾಂಗ್ರೆಸ್ ಸರಕಾರ ಬದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ . ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆಂದು ಹಸಿಸುಳ್ಳು ಹೇಳಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ .
ಮಾದಿಗ ಮತ್ತು ಉಪಜಾತಿಗಳ ಈ ಹೋರಾಟಕ್ಕೆ ಸಹಕಾರ ಕೊಡಬೇಕೆಂದು ಎಲ್ಲರಲ್ಲಿ ವಿನಂತಿಸುತ್ತೇವೆ…
ವರದಿ. ಕಾಶೇಪ್ಪ ಸಂಡೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030