ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ…!!!

Listen to this article

ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟ

ಪತ್ರಿಕಾ ಹೇಳಿಕೆ

ಸುಪ್ರೀಂಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿಸೆಂಬರ್ 16 ರಂದು ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನೆಡಸಲಾಗುವುದು .

ಆಗಸ್ಟ್ 1 ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು . ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕದ ಸರ್ಕಾರ ಅಮೆಗತಿಯಲ್ಲಿ ಸಾಗಿದೆ . ಕಾಟಾಚಾರಕ್ಕೆ ನ್ಯಾ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ , 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು . ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ , ಆಯೋಗಕ್ಕೆ ಬೇಕಾದ ಕಛೇರಿ , ಸಿಬ್ಬಂದಿ , ಹಣಕಾಸಿನ ನೆರವುಕೊಡದೆ ಕಾಲಾಹರಣ ನೆಡೆಸಲಾಗುತ್ತಿದೆ . ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ , ಸರಕಾರದ ಮುಂದೆ ನ್ಯಾ ಸದಾಶಿವ ಆಯೋಗ , ಮಾಧುಸ್ವಾಮಿ ಸಮಿತಿ ವರದಿ ಇದೆ . ಮಾಧುಸ್ವಾಮಿ ಯವರ ಸಮಿತಿ ಏಕೆ , ಏಡಿ ಸಮಸ್ಯೆಗೆ ಪರಿಹಾರಒದಗಿಸಿದೆ , 2011ರ ಜನಗಣತಿಯ ಅಂಕಿಅಂಶಗಳ ಅಧಾರದಲ್ಲಿ ವರ್ಗೀಕರಣ ಮಾಡಿದೆ . ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ . ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ .

ಒಳಮೀಸಲಾತಿ ಜಾರಿ ಆಗುವ ವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು . ಆದರೆ ಈ ಭರವಸೆ ಜಾರಿಯಾಗಿಲ್ಲ , ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ . ಇದು ಖಂಡನಾರ್ಹ .

ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಇದೇ ಡಿ 16 ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆಕೊಡಲಾಗಿದೆ .
ಬೆಳಗಾವಿ ಸಮಾವೇಶದ ಮೊದಲು ರಾಜ್ಯದ ಎಲ್ಲ ಶಾಸಕರ ಮನೆಯಮುಂದೆ ಡಿಸೆಂಬರ್ 14 ರಂದು ಶನಿವಾರ ತಮಟೆ ಚಳವಳಿ ನೆಡಸಿ ವಿಧಾನಸೌಧದಲ್ಲಿ ಒಳಮೀಸಲಾತಿಯ ಪರವಾಗಿ ಧ್ವನಿ ಎತ್ತಲು ಆಗ್ರಹಿಸಲಾಗುವುದು .

ಹರಿಯಾಣದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟಿನ ತೀರ್ಪು ಬಂದ ಮೊದಲವಾರದಲ್ಲೆ ಒಳಮೀಸಲಾತಿಯನ್ನು ಜಾರಿಮಾಡಿದೆ . ಆದರೆ ಕರ್ನಾಟಕದ ಕಾಂಗ್ರೆಸ್ ಸರಕಾರ ಬದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ . ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆಂದು ಹಸಿಸುಳ್ಳು ಹೇಳಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ .
ಮಾದಿಗ ಮತ್ತು ಉಪಜಾತಿಗಳ ಈ ಹೋರಾಟಕ್ಕೆ ಸಹಕಾರ ಕೊಡಬೇಕೆಂದು ಎಲ್ಲರಲ್ಲಿ ವಿನಂತಿಸುತ್ತೇವೆ…

ವರದಿ. ಕಾಶೇಪ್ಪ ಸಂಡೂರು ಗ್ರಾಮಾಂತರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend