ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು- ಡಾ ಎರ್ರಿಸ್ವಾಮಿ ಹೆಚ್, ಇಂದು ಸರ್ಕಾರಿ ಪದವಿಪೂರ್ವ ಕಾಲೇಜು ಚೋರನೂರಿನಲ್ಲಿ ರೀಚ್ ಸಂಸ್ಥೆ ಸಂಡೂರು ವತಿಯಿಂದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ ಎರ್ರಿಸ್ವಾಮಿ ಹೆಚ್ ಅವರು ಮಾತನಾಡುತ್ತಾ, ಇಂದಿನ ಸಾಮಾಜಿಕ ಪರಿಸರವು ಕಲುಷಿತಗೊಂಡಿದೆ. ಅನೇಕ ಪ್ರಭಾವಗಳಿಗೆ ಒಳಗಾಗುವ ಯುವಜನರು ತಮ್ಮ ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ.
ಯುವಕರನ್ನು ದಾರಿತಪ್ಪಿಸುವ ಅವರನ್ನು ಕೀಳುಮಟ್ಟದ ಸಂಸ್ಕೃತಿಗೆ ಒಳಪಾಡುವಂತಹ ಇಂದಿನ ಸಾಮಾಜಿಕ ಪರಿಸ್ಥಿತಿಗಳ ಕೈಗೊಂಬೆಯಾಗುತ್ತಿರುವುದು ಬೇಸರದ ಸಂಗತಿ. ಸಂಡೂರು ತಾಲ್ಲೂಕಿನ ಗ್ರಾಮೀಣ ಭಾಗದ ಯುವಕರು ಅರ್ಧದಲ್ಲಯೇ ಶಿಕ್ಷಣದಿಂದ ವಂಚಿತರಾಗಿ ದುಡಿಮೆಯ ಬೆನ್ನು ಹತ್ತಿದ್ದಾರೆ. ಅಕ್ಷರ ಕಲಿಯಬೇಕಾದ ವಿದ್ಯಾರ್ಥಿಗಳು ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕರಾಗಿ ಗಣಿ ಲಾರಿಗಳಲ್ಲಿ ದುಡಿಯುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಹೆಣ್ಣುಮಕ್ಕಳ ವಯಸ್ಸು ಅತ್ಯಂತ ಕಡಿಮೆ ವಯಸ್ಸಿಗೆ ವಿವಾಹವಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪೋಷಕರ ಧಾರ್ಮಿಕ ನಂಬಿಕೆಗಳು, ಮೌಢ್ಯ ಆಚರಣೆಗಳಿಂದ ಚಿಕ್ಕವಯಸ್ಸಿಗೆ ಮಕ್ಕಳಿಗೆ ಮದುವೆ ಮಾಡುವ ಮೂಲಕ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುಲಾಗುತ್ತಿದೆ. ಇಂತಹ ಸಾಮಾಜಿಕ ಪಿಡುಗು ಹೋಗಲಾಡಿಸಲು ಪ್ರಜಾವಂತ, ಶಿಕ್ಷಣ ಕಲಿತ ಯುವಕರು ಬಾಲ್ಯ ವಿವಾಹ ಮುಕ್ತ ಗ್ರಾಮ, ತಾಲ್ಲೂಕು, ಜಿಲ್ಲೆಯಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಂಗ್ಲ ಭಾಷೆ ಉಪನ್ಯಾಸಕರಾದ ಪ್ರಕಾಶ್ ಬಿ ಅವರು ಇಂದಿನ ಯುವಕರು ಸಾಮಾಜಿಕ ಸ್ವಸ್ಥ ಪರಿಸರ ನಿರ್ಮಾಣದ ಜೊತೆಗೆ ಶಿಕ್ಷಿತರಾಗುವ ಮೂಲಕ ಗ್ರಾಮೀಣ ಭಾಗದಲ್ಲಿ ನಡೆಯುವ ಬಾಲ್ಯ ವಿವಾಹ ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಮುಂದಾಗಬೇಕೆಂದು ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಶರಣಬಸವಯ್ಯ ಮಾತನಾಡುತ್ತಾ ಇಂತಹ ಉಪನ್ಯಾಸಗಳಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಅವರಲ್ಲಿ ಶಿಕ್ಷಣದ ಹಕ್ಕನ್ನು ಪಡೆಯುವಂತಹ ವಾತಾವರಣವನ್ನು ನಿರ್ಮಿಸಲು ಸಹಕಾರಿಯಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ನಾಗರಾಜ್, ಓಬಳೇಶ್, ಹಾಗೂ ನೂರಾರು ವಿದ್ಯಾರ್ಥಿಗಳು ಬಾಲ್ಯ ವಿವಾಹ ಮುಕ್ತ ಭಾರತ ಪ್ರತಿಜ್ಞೆ ವಿಧಿ ಕೈಗೊಳ್ಳುವ ಮೂಲಕ ಸಂಡೂರು ತಾಲ್ಲೂಕನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸಲು ಪಣತೊಟ್ಟರು….
ವರದಿ. ಕಾಶೇಪ್ಪ ಸಂಡೂರು ಗ್ರಾಮಾಂತರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030