ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲು ಸೂಚನೆ
ಹಾಸನ :- ರೈತರನ್ನು ರೈತ ಸಂಪರ್ಕ ಕೇಂದ್ರಗಳಿಗೆ ಅಲೆಸದೆ ಕೃಷಿ ಚಟುವಟಿಕೆ ಗಳಿಗೆ ಅಗತ್ಯವಿರುವ ಉತ್ತಮ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕ ವಿತರಣೆಗೆ ಕ್ರಮವಹಿಸುವಂತೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿoದು ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರಗಳನ್ನು ಮಾರಾಟ ಮಾಡುವುದು ಹಾಗೂ ಕಳಪೆ ಗುಣಮಟ್ಟದ ಗೊಬ್ಬರ ಮಾರಾಟ ಮಾಡುವುದರ ಬಗ್ಗೆ ಗಮನಹರಿಸಿ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡುವಂತೆ ಸೂಚಿಸಿದರು.
ಗುಣಮಟ್ಟದ ಕೃಷಿ ಪರಿಕರಗಳನ್ನು ನೀಡಲು ಅಧಿಕಾರಿಗಳು ಎಚ್ಚರವಹಿಸುವಂತೆ ನಿರ್ದೇಶನ ನೀಡಿದರಲ್ಲದೆ, ಕಾಲಕಾಲಕ್ಕೆ ಸಬ್ಸಿಡಿ ದೊರೆಯುತ್ತದೆ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.
ಮುಂಗಾರಿಗೆ ಮುನ್ನ ತೆಂಗಿನ ಸಸಿಗಳನ್ನು ರೈತರಿಗೆ ನೀಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಗಿಡಗಳು ನಶಿಸಿ ಹೊಗದಂತೆ ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶ ಮತ್ತು ಜೈವಿಕ ತಂತ್ರಜ್ಞಾನ ಬಳಕೆಗೆ ರೈತರಿಗೆ ಅರಿವು ಮೂಡಿಸಲು ಸೂಚಿಸಿದರು.
ಬೇಡಿಕೆಗೆ ಅನುಗುಣವಾಗಿ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕಿನ ರೈತರಿಗೆ ಮೆಣಸಿನ ಸಸಿಗಳನ್ನು ನೀಡುವಂತೆ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಹೊರಗಡೆಗೆ ಚೀಟಿ ಬರೆದು ಕೊಡುತ್ತಿದ್ದಾರೆ ಎಂದು ದೂರುಗಳು ಕೇಳಿ ಬಂದಿದ್ದು, ಈ ರೀತಿ ಮಾಡದೆ ರೋಗಿಗಳಿಗೆ ಆಸ್ಪತ್ರೆಯಲ್ಲಿರುವ ಔಷಧಿಗಳ ವಿತರಣೆಗೆ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಿರ್ದೇಶನ ನೀಡಿದರು.
ಆಸ್ಪತ್ರೆಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ ಕ್ರಮವಹಿಸಲು ಸೂಚನೆ ನೀಡಿದರು. ರಾತ್ರಿ ವೇಳೆಯಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸುತ್ತಿಲ್ಲ ಈ ನಿಟ್ಟಿನಲ್ಲಿ ಗಮನಹರಿಸಿ ಸಾರ್ವಜನಿಕರಿಗೆ ನೆರವಾಗುವಂತೆ ತಿಳಿಸಿದರಲ್ಲದೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ವೈದ್ಯರಿರುವಂತೆ ನೋಡಿಕೊಳ್ಳಿ ಎಂದು ಡಿ.ಹೆಚ್.ಓ. ಅವರಿಗೆ ಸೂಚನೆ ನೀಡಿದರು.
ಅಂಬುಲೆನ್ಸ್ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದಾರೆ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಇ.ಸಿ.ಜಿ. ಕಡ್ಡಾಯವಾಗಿ ಮಾಡಬೇಕು ಎಂದು ಸುತ್ತೋಲೆ ಹೊರಡಿಸುವಂತೆ ತಿಳಿಸಿದರು.
ಅಪೌಷ್ಟಿಕತೆ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಈ ನಿಟ್ಟಿನಲ್ಲಿ ಮುಂದಿನ ದಿಶಾ ಸಭೆಯೊಳಗೆ ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಲು ಜಿಲ್ಲೆಯಲ್ಲಿ ಸರ್ವೇ ಮಾಡಿಸಲು ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವ ಸರ್ಕಾರಿ ಶಾಲೆಗಳು ಹಾಗೂ ಮಕ್ಕಳ ಪಟ್ಟಿ ತಯಾರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ 234 ರಲ್ಲಿ ನಾಲ್ಕು ಕಡೆಗಳಲ್ಲಿ ಕೆಲಸ ಪೂರ್ಣಗೊಳಿಸದೆ ಜನರು ತೊಂದರೆ ಅನುಭವಿಸ್ಮತ್ತಿದ್ದಾರೆ ಜವಾಬ್ದಾರಿಯಿಂದ ಗುತ್ತಿಗೆದಾರರನ್ನು ಕರೆತಂದು ಕೆಲಸ ಮಾಡಿಸಲು ನಿರ್ವಹಿಸಿ ಎಂದು ತಿಳಿಸಿದರು.
ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ನಡೆಯುತ್ತಿದೆ ಹೆಚ್ಚುವರಿ ದುಡ್ಡು ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರಗಳು ಕೇಳಿ ಬಂದಿದೆ. ಕೆಂಪು, ಕಪ್ಪುರಾಗಿ ಎಂದು ತಾರತಮ್ಯ ಮಾಡದೆ ಎಲ್ಲಾ ರಾಗಿಯನ್ನು ಖರೀದಿಗೆ ಕ್ರಮವಹಿಸಲು ಸೂಚಿಸಿದರಲ್ಲದೆ, ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರಾರಂಭವಾಗಿದ್ದು, ಯಾವುದೇ ಕುಟುಂಬ ಸಮೀಕ್ಷೆ ಯಲ್ಲಿ ತಪ್ಪಿ ಹೋಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಾಮಾಜಿಕ ಅರಣ್ಯದಿಂದ ಗಿಡಗಳನ್ನು ನೆಟ್ಟು ಸಂರಕ್ಷಣೆ ಮಾಡುವಂತೆ ತಿಳಿಸಿದರು. ಹಾಸನ ನಗರ ಪಾಲಿಕೆ ಆಗಿರುವುದರಿಂದ ಅಭಿವೃದ್ಧಿಯಾಗದಿರುವ ಸ್ಥಳಗಳನ್ನು ಗುರುತಿಸಿ ಮಳೆಗಾಲದಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಣೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂಗಾರಿನಲ್ಲಿಯೇ ರೈತರಿಗೆ ಗಿಡಗಳನ್ನು ವಿತರಣೆ ಮಾಡುವಂತೆ ತಿಳಿಸಿದರು.
ಕೆರೆಗಳಿಗೆ ಕಲುಷಿತ ನೀರು ಸೇರ್ಪಡೆ ಆಗದಂತೆ ತಡೆಯಲು ನಿಗಾ ವಹಿಸಲು ಸೂಚನೆ ನೀಡಿದರು.ಕೆರೆಗಳ ಆಧುನಿಕರಣಕ್ಕೆ ಕ್ರಮ ವಹಿಸುವಂತೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಕೆರೆ ಕೋಡಿ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗು ತ್ತದೆ ಈ ನಿಟ್ಟಿನಲ್ಲಿ ಅಂತಹ ಕೆರೆಗಳನ್ನು ಗುರುತಿಸಿ ಎಚ್ಚರ ವಹಿಸಿ ದುರಸ್ತಿ ಕಾರ್ಯಕ್ಕೆ ಗಮನಹರಿಸಲು ಸೂಚಿಸಿದರು.
ರೈತರಿಗೆ ತೊಂದರೆ ಆಗದಂತೆ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿ ಸಮಯದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.
ಹಂಗರಹಳ್ಳಿ ಮೇಲ್ಸೇತುವೆ ಕಾಮಗಾರಿ ಹಾಗೂ ಹಾಸನ ನಗರದ ಎನ್ ಆರ್ ವೃತ್ತದ ಮೇಲ್ಸೇತುವೆ ಪೂರ್ಣಗೊಳಿಸುವಂತೆ ಕ್ರಮವಹಿಸಲು ಸೂಚನೆ ನೀಡಿದರು.
ರೈಲ್ವೆ ಕಾಮಗಾರಿಗಳಿಗೆ ಸಂಬoಧಿಸಿದoತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ನಗರ ಪಾಲಿಕೆಗೆ ಅಗತ್ಯವಿರುವ ಸಿಬ್ಬಂದಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಯೋಜನಾ ನಿರ್ದೇಶಕರಿಗೆ ಸೂಚಿಸಿದರಲ್ಲದೆ, 15 ನೇ ಹಣಕಾಸನ್ನು ಪಾರದರ್ಶಕವಾಗಿ ಬಳಕೆಗೆ ಕ್ರಮವಹಿಸಲು ಸೂಚನೆ ನೀಡಿದರು.
ಹೊಳೆನರಸೀಪುರದ ಅಂಬೇಡ್ಕರ್ ನಗರದಲ್ಲಿ ಅರ್ಧಕ್ಕೆ ನಿಂತಿವೆ ಏನ್ ಮಾಡುತ್ತಿದ್ದೀರಾ ಎಂದು ಸಂಸದರು ಗರಂ ಆದರು ಪೂರ್ಣಗೊಳಿಸಲು ನಿಗಾವಹಿಸಲು ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಅಭಿಯಂತರರಿಗೆ ನಿರ್ದೇಶನ ನೀಡಿದರು. ಎಲ್ಲಾ ತಾಲ್ಲೂಕುಗಳಲ್ಲಿ ನಿಮ್ಮ ಮೇಲೆ ದೂರುಗಳಿವೆ ಎಂದು ಎಚ್ಚರಿಕೆ ನೀಡಿದರು.
ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ಸಂಚಾರಿ ವಾಹನದ ಮೂಲಕ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಇದನ್ನು ಗ್ರಾಮೀಣ ಪ್ರದೇಶದಲ್ಲಿ ಅರಿವು ಮೂಡಿಸಲು ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಸ್ಪಂದಿಸಿ ಕೆಲಸ ಮಾಡುವ ಡಿಪೋ ಮ್ಯಾನೇಜರ್ ಹಾಕುವಂತೆ ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಯೋಜನೆಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಲೀಡ್ ಬ್ಯಾಂಕ್ ಸಾಲ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಸೂಚಿಸಿದರು.
ಮರಳು ಬ್ಲಾಕ್ ಗಳಲ್ಲಿ ಪಾರದರ್ಶಕವಾಗಿ ಮಾಡಿ ಪೊಲೀಸ್ ಮತ್ತು ಗಣಿ ಇಲಾಖೆ ಅವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮರಳು ಕಳ್ಳಸಾಗಣೆ ತಡೆಯಲು ನಿಗಾವಹಿಸಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಪಿ.ಎಂ.ಜಿ.ವೈ ಯೋಜನೆಯಡಿ ಗುರಿ ಸಾಧಿಸಲು ವಿಶೇಷ ಅಭಿಯಾನ ನಡೆಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಪಶು ಸಂಗೋಪನಾ ಇಲಾಖೆ ಕಾಲುಬಾಯಿ ಲಸಿಕೆ ಯಾವುದೇ ಜಾನುವಾರುಗಳಿಗೆ ತಪ್ಪಿ ಹೋಗದಂತೆ ನಿಗಾ ವಹಿಸಲು ಸೂಚನೆ ನೀಡಿದರು.
ಜನರಿಂದ ಔಷಧಿಗಳಿಗೆ ಹಣ ತೆಗೆದುಕೊಳ್ಳುತ್ತಾರೆ ಎಂದು ದೂರುಗಳು ಕೇಳಿ ಬರುತ್ತಿವೆ ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಿ ಪರಿಶೀಲನೆ ಮಾಡುವಂತೆ ಸೂಚಿಸಿದರು. ಅಬಕಾರಿ ಇಲಾಖೆಯಿಂದ ರಸ್ತೆ ಬದಿಯಲ್ಲಿ ಸಿ.ಎಲ್.7 ಗೆ ಅನುಮತಿ ನೀಡಿದ್ದೀರಿ ಸರ್ಕಾರದ ಮಾನದಂಡಗಳನ್ನು ಅನುಸರಿಸುವಂತೆ ನಿರ್ದೇಶನ ನೀಡಿದರು.
ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಕಾಮಗಾರಿಗಳಲ್ಲಿ ಪೈಪ್ ಗಳನ್ನು ಹಾಕಿದ ತಕ್ಷಣ ಸಾರ್ವಜನಿಕರಿಗೆ ತೊಂದರೆಯಾಗದAತೆ ಮುಚ್ಚಬೇಕು ಎಂದು ತಿಳಿಸಿದರು.
ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ ಎಂ.ಶಿವಲಿAಗೇಗೌಡ ಅವರು ಮಾತನಾಡಿ ಫಸಲ್ ಭೀಮಾ ಯೋಜನೆ ಏಜೆನ್ಸಿಯವರಿಗೆ ಅನುಕೂಲವಾಗುತ್ತಿದೆ ರೈತರ ಹಣವನ್ನು ಲೂಟಿ ಮಾಡುತ್ತಿದ್ದಾರೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಸಂಸದರಿಗೆ ತಿಳಿಸಿದರು.
ನರೇಗಾ ಯೋಜನೆಯಡಿ ತೆಂಗಿನ ಸಸಿಗಳನ್ನು ನಡೆಸಲು ಪ್ರೋತ್ಸಾಹ ನೀಡಿ ಇದೊಂದು ಶಾಶ್ವತವಾದ ಬೆಳೆ ಎಂದು ಹೇಳಿದರು. ತೆಂಗಿನ ಮರಗಳಿಗೆ ತಲೆದೂರುತ್ತಿರುವ ಕಪ್ಪು ತಲೆ ಹುಳು ಮತ್ತು ಬಿಳಿ ನೋಣದ ಬಾಧೆಯನ್ನು ತಡೆಗಟ್ಟಲು ತಜ್ಞರಿಂದ ಉನ್ನತ ಮಟ್ಟದ ಅಧ್ಯಯಾನ ಆಗಬೇಕು ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳಿದ್ದರು ಸಾರ್ವಜನಿಕ ರಿಗೆ ಉತ್ತಮ ಸೇವೆ ಒದಗಿಸದೆ ವೈದ್ಯರು ಖಾಸಗಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಡಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಹೇಳಿದರು.
ಕೆ.ಪಿ.ಟಿ.ಸಿ.ಎಲ್ ನಿಂದ ವಿದ್ಯುತ್ ಮಾರ್ಗಗಳು ಹಾದುಹೋಗುವ ಸ್ಥಳದಲ್ಲಿ ತೆಂಗಿನ ಮರಗಳಿಗೆ ಸೂಕ್ತ ಪರಿಹಾರ ನೀಡಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಒಂದು ಮರಕ್ಕೆ ಎಷ್ಟು ವಯಸ್ಸಾಗಿದೆ ಮುಂದೆ ಎಷ್ಟು ವರ್ಷ ಬಾಳುತ್ತದೆ ಎಷ್ಟು ಆದಾಯ ಬರುತ್ತದೆ ಎಂಬುದನ್ನು ಪರಿಗಣಿಸಿ ರೈತರಿಗೆ ಮೋಸವಾಗದಂತೆ ಪರಿಹಾರ ನಿಗದಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸತ್ಯಭಾಮ ಸಿ, ಅವರು ಮಾತನಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯದ ಸಂದರ್ಭದಲ್ಲಿದ್ದು ನಿಷ್ಠೆ, ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಲು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ನಾಮ ನಿರ್ದೇಶಿತ ಸದಸ್ಯರುಗಳಾದ ತಾರಾ ಚಂದನ್, ಮಂಜುಳಾ ಬಾಯಿ, ಎಲ್ ಡಿ.ಬಸವರಾಜು, ಶಿವಕುಮಾರ್, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030