ತಾಲ್ಲೂಕಿನ ಜೆ.ಜೆ.ಹಳ್ಳಿಗ್ರಾಮದಲ್ಲಿಸಂವಿಧಾನಶಿಲ್ಪಿ
ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನಾಚರಣೆ
ಅಂಗವಾಗಿ ರಾಜ್ಯ ಬಿ.ಜೆ.ಪಿ.ನೇತೃತ್ವದ ಭೀಮಹೆಜ್ಜೆ
ರಥಯಾತ್ರೆಗೆ ಸಂಜೆ ಭವ್ಯಸ್ವಾಗತ ಕೋರಲಾಯಿತು.
ಹಿರಿಯೂರು:
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ರಾಜ್ಯ ಬಿ.ಜೆ.ಪಿ. ನೇತೃತ್ವದ ಭೀಮಹೆಜ್ಜೆ ರಥಯಾತ್ರೆಗೆ ತಾಲ್ಲೂಕಿನ ಜೆ.ಜಿ. ಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಭವ್ಯ ಸ್ವಾಗತ ಕೋರಲಾಯಿತು.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನಿಂದ ಆಗಮಿಸಿದ ರಥಯಾತ್ರೆಗೆ ಜೆ.ಜಿ. ಹಳ್ಳಿಯಲ್ಲಿ ಬಿ.ಜೆ.ಪಿ. ಮಂಡಲ ಅಧ್ಯಕ್ಷ ಅಭಿನಂದನ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಕರ್ನಾಟಕದ ನಿಪ್ಪಾಣಿಯಲ್ಲಿ ಭಾಷಣ ಮಾಡಿ ಏಪ್ರಿಲ್ 10 ಕ್ಕೆ 100 ವರ್ಷವಾಗುವ ಹಿನ್ನಲೆಯಲ್ಲಿ ಬಿ.ಜೆ.ಪಿ.ಯಿಂದ ಭೀಮ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.
ಜೆ.ಜಿ.ಹಳ್ಳಿಯಿಂದ ಹಿರಿಯೂರಿಗೆ ಆಗಮಿಸಿದ ರಥಯಾತ್ರೆ ನಗರದ ಮುಖ್ಯ ರಸ್ತೆ ಮೂಲಕ ಪ್ರವಾಸಿ ಮಂದಿರ ವೃತ್ತಕ್ಕೆ ತೆರಳಿ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಬಿ.ಜೆ.ಪಿ.ಮಂಡಲ ಅಧ್ಯಕ್ಷರಾದ ಅಭಿನಂದನ್ ಅವರು ಮಾತನಾಡಿ ವಿಶ್ವ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ. ಇಂದಿನ ಯುವಜನತೆ ಅವರ ಆದರ್ಶ ಜೀವನ,ಹೋರಾಟದ ಬದುಕು, ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಭವ್ಯ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂಬುದಾಗಿ ಅವರು ಹೇಳಿದರು.
ಬಿ.ಜೆ.ಪಿ ಮುಖಂಡರಾದ ಕೇಶವಮೂರ್ತಿ ಅವರು ಮಾತನಾಡಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸೋಲಿಸಿದ್ದಲ್ಲದೆ, ಬಾಬಾಸಾಹೇಬರು ನಿಧನರಾದ ಸಮಯದಲ್ಲಿ ಅವರಿಗೆ ಗೌರವ ನೀಡದೆಅವಮಾನಿಸಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಬೇಡ್ಕರ್ ರವರಿಗೆ ಗೌರವ ಸಲ್ಲಿಸಿದೆ. ದೇಶದ ಪ್ರಜಾಪ್ರಭುತ್ವ ಸಂವಿಧಾನ ಸುರಕ್ಷಿತವಾಗಿದೆ ಎಂಬುದಾಗಿ ಅವರು ಹೇಳಿದರು.
ಈ ರಥಯಾತ್ರೆಯಲ್ಲಿ ಮಾಜಿ ಸಂಸದ ಮುನಿಸ್ವಾಮಿ, ಮಧುಗಿರಿ ಬಿ.ಜೆ.ಪಿ. ಅಧ್ಯಕ್ಷ ಹನುಮಂತೇಗೌಡ, ಮುಖಂಡರುಗಳಾದ ಹಾಲಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಶ್ರೀಮತಿ ಮಂಜುಳಾ, ವಿಶ್ವನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030