ನಗರದ ಸರ್ಕಾರಿ ಆಸ್ಪತ್ರೆಗೆ ಬರುವ ಹೊರರೋಗಿಗಳಿಗೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಉಚಿತ ಆಹಾರವಿತರಣೆ…!!!

Listen to this article

ನಗರದ ಸರ್ಕಾರಿ ಆಸ್ಪತ್ರೆಗೆ ಬರುವ ಹೊರರೋಗಿಗಳಿಗೆ
ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಉಚಿತ ಆಹಾರವಿತರಣೆ
ಹಿರಿಯೂರು :
ನಗರದ ಸರ್ಕಾರಿ ಆಸ್ಪತ್ರೆಯ ಹೊರರೋಗಿಗಳಿಗೆ ನೆರವಾಗಲೆಂದು ಪ್ರತಿ ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಉಚಿತ ಆಹಾರ ವಿತರಣೆಯನ್ನು ಮಾಡಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಆಸ್ಪತ್ರೆಗೆ ಬರುವ ನಗರ ಹಾಗೂ ಗ್ರಾಮೀಣ ಪ್ರದೇಶದ ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಆಸ್ಪತ್ರೆಗೆ ಬರುವ ಹೊರರೋಗಿಗಳಿಗೆ ಉಚಿತ ಆಹಾರ ವಿತರಣೆ ಮಾಡಿ, ನಂತರ ಅವರು ಮಾತನಾಡಿದರು.
ಅನಾರೋಗ್ಯದ ಕಾರಣದಿಂದ ತುರ್ತಾಗಿ ಆಸ್ಪತ್ರೆಗೆ ಬರುವ ರೋಗಿಗಳ ಹಸಿವನ್ನು ನೀಗಿಸುವ ಉದ್ದೇಶದಿಂದ ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳು ದಾನಿಗಳ ನೆರವಿನೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಿಂದ ನೂರಾರು ಜನರಿಗೆ ಅನುಕೂಲವಾಗುತ್ತಿದೆ ಎಂಬುದು ಸಂತಸದ ವಿಚಾರವಾಗಿದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ರೆಡ್ ಕ್ರಾಸ್ ಸಂಸ್ಥೆ ಸದಸ್ಯರಾದ ಎ.ರಾಘವೇಂದ್ರ, ಸೇರಿದಂತೆ ಆಸ್ಪತ್ರೆಯ ಹೊರರೋಗಿಗಳು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend