ಈ ದಿನ ಚಿಕ್ಕಜಾಜೂರು ಯೋಜನಾ ಕಚೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಲ್ಲಾಡಿಹಳ್ಳಿ ವಲಯದ ಕಾಲ್ಕೆರೆ ಕಾರ್ಯಕ್ಷೇತ್ರದ ಶ್ರೀ ಮಲ್ಲಿಕಾರ್ಜುನ ಜ್ಞಾನ ವಿಕಾಸ ಕೇಂದ್ರದ 3 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು…
ಸಭಾಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಶ್ರೀಮತಿ ಚಂದ್ರಮ್ಮ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು…
ಪ್ರಾಸ್ತವಿಕ ನುಡಿಯನ್ನು ಜ್ಞಾನ ವಿಕಾಸ ಸಮನ್ವಯಾಧಿಕಾರಿಯಾದ ರಂಜಿತಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಡೆದು ಬಂದ ದಾರಿಯ ಬಗ್ಗೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ಮಹಿಳೆಯರಿಗೆ ಅಂತಾನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಮಹಿಳೆಯರ ಪ್ರತಿಭೆಯನ್ನು ಗುರುತಿಸುವ ವೇದಿಕೆಯನ್ನು ನೀಡಿದ್ದು ಇದರ ಸದುಪಯೋಗವನ್ನು ಎಲ್ಲಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಪ್ರತಿ ತಿಂಗಳು ಕೇಂದ್ರ ಸಭೆಗೆ ಭಾಗವಹಿಸುದಾರ ಮೂಲಕ ಸದುಪಯೋಗವನ್ನು ಪಡೆಯಬೇಕು.. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಕೂಟ ಸ್ಪರ್ಧೆ ಸಾಂಸ್ಕೃತಿಕ ನೃತ್ಯ ಸ್ಪರ್ಧೆ ರಂಗೋಲಿ ಸ್ಪರ್ಧೆ ಆಯೋಜಿಸಿದ್ದು ಮಹಿಳೆಯರ ಪ್ರತಿಭೆಗಳನ್ನು ಗುರುತಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನವನ್ನು ವಿತರಿಸುವ ಕಾರ್ಯಕ್ರಮವಾಗಿದೆ ಇದಾಗಿದೆ ಎಂದು ಮಾಹಿತಿ ನೀಡಿದರು..
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿರುವ ಕುಮಾರಪ್ಪ ಯವರು ಸಂಸ್ಕಾರ ಹಾಗೂ ಸಂಸ್ಕೃತಿಯಲ್ಲಿ ಕುಟುಂಬದಲ್ಲಿನ ಪ್ರತಿಯೊಬ್ಬ ಸದಸ್ಯರ ಪಾತ್ರದ ಬಗ್ಗೆ
ಮಾಹಿತಿಯನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಓಂಕಾರಪ್ಪ ನಿವೃತ್ತ ಶಿಕ್ಷಕರು, ಮಲ್ಲಿಕಾರ್ಜುನ ದೇವಸ್ಥಾನ ಕಮಿಟಿಯ ಅಧ್ಯಕ್ಷರು ದೇವೇಂದ್ರಪ್ಪ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಬಸವ ಕುಮಾರ್ ಇವರು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಸೇವಾ ಪ್ರತಿನಿಧಿ ಮಂಜಮ್ಮ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030