ಹೊಳಲ್ಕೆರೆ. ತಾಲ್ಲೂಕಿನ ತಾಳಿಕಟ್ಟೆ ಗ್ರಾಮದಲ್ಲಿ ಶನಿವಾರ ಕನಕ ಜಯoತೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದ ಶ್ರೀ ಈಶ್ವರಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಶಾಸಕ ಡಾ. ಎಂ. ಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾಳಿಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕನಕ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವದ ಸಾನಿಧ್ಯ ವಹಿಸಿದ್ದ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತ ಹಾಲು ಕೆಟ್ಟರು ಕೆಡಬಹುದು. ಹಾಲು ಮತಸ್ಥರು ಎಂದಿಗೂ ಕೆಡುವುದಿಲ್ಲ. ಹಾಲು ಮತ ಧರ್ಮಕ್ಕೆ ಅಂತಹ ಶ್ರೇಷ್ಟತೆಯಿದೆ.
೬೦೦ ವರ್ಷಗಳ ಹಿಂದೆಯೇ ಸಮಾನತೆಯ ಸಂದೇಶ ಸಾರಿದ ಸಂತ ಶ್ರೇಷ್ಠ ಭಕ್ತ ಕನಕದಾಸರು ಕೀರ್ತನೆಯ ಮೂಲಕ ಜಾತಿ ಪದ್ದತಿಯನ್ನು ವಿರೋಧಿಸಿದರು. ಅಂತಹ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಎಲ್ಲರಿಗೂ ಕರೆ ನೀಡಿದರು.
ಈ ಸಂದರ್ಭ ರೇವಣಯ್ಯ ಒಡೆಯರ್, ಗುರಯ್ಯ ಒಡೆಯರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ. ಬಸವರಾಜ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ. ಗಂಗಾಧರ, ಡಿ.ಸಿ.ಮೋಹನ್, ಕರಿಯಣ್ಣ, ನುಲೆನೂರು ಶೇಖರ್, ಲೋಕೇಶ್, ಚಂದ್ರಪ್ಪ, ಗೋವಿಂದಪ್ಪ, ಅಳಪ್ಪ, ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030