ಹೊಳಲ್ಕೆರೆ. ವಿದ್ಯಾರ್ಥಿಗಳು ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ಪುರಸಭೆ ಉಪಾಧ್ಯಕ್ಷರಾದ ಶ್ರೀಮತಿ ನಾಗರತ್ನ ವೇದಮೂರ್ತಿ ತಿಳಿಸಿದರು.
ಅವರು ಇಮ್ಮಾನುವೆಲ್ ಮಿಷನ್ ಹಿರಿಯ ಪ್ರಾಥಮಿಕ ಪಾಠ ಶಾಲೆಯ
ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಈ ಶಾಲೆಯು 25 ವರ್ಷಗಳಿಂದ ಗ್ರಾಮೀಣಭಾಗದ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳನ್ನು ಉತ್ತಮವಾಗಿ ನಡೆಸಿಕೊಂಡು ಬಂದಿರುವಂತಹ ಒಂದು ಸಂಸ್ಥೆಯಾಗಿದೆ. ಅಂದಿನ ಕಾಲಘಟ್ಟದಲ್ಲಿ ಪೆನ್ನು ಪೆನ್ಸಿಲ್ ಪುಸ್ತಕ ಯಾವುದೇ ಸಾಮಗ್ರಿಗಳು ಇರಲಿಲ್ಲ ಇವತ್ತಿನ ದಿನಗಳಲ್ಲಿ ಪೆನ್ನು ಪುಸ್ತಕ ಸ್ಲೇಟು ಬಳಪ ಮತ್ತಿತರ ಸಾಮಗ್ರಿಗಳನ್ನು ಬಳಸುವಂತಹ ಆಧುನಿಕ ಯುಗವಾಗಿದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತು ನೀಡಬೇಕೆಂದು ತಿಳಿಸಿದರು.
ಇನ್ನು ಪ್ರಾಥಮಿಕ ಪಾಠಶಾಲೆಯ ಕಾರ್ಯದರ್ಶಿಗಳಾದ ಬಿಜು ಪಿ ಜಾಯ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದಲ್ಲಿ ವಂಚಿತರಾಗಿದ್ದ ವಿದ್ಯಾರ್ಥಿಗಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವುದು ನಮ್ಮ ಸಂಸ್ಥೆಯ ಗುರಿಯಾಗಿರುತ್ತದೆ ಶಿಕ್ಷಣ ಜ್ಞಾನಾರ್ಜನೆ ಸಾಂಸ್ಕೃತಿಕ ಮೌಲ್ಯಗಳನ್ನು ನೀಡುವುದು ನಮ್ಮ ಶಾಲೆಯ ಉದ್ದೇಶವಾಗಿದೆ ಎಂದರು. ಗುರುಗಳನ್ನು ದೇವರಿಗೆ ಹೋಲಿಕೆ ಮಾಡಿದ್ದಾರೆ ಗುರುಗಳು ಬರುವ ದಿನಮಾನಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ರೂಪಿಸಬೇಕೆಂದರು.
ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಕಾರ್ಯಧ್ಯಕ್ಷರಾದ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ. ಶಾಲೆಯ ಆವರಣದಲ್ಲಿ ಔಷದಿಯ ಸಸ್ಯಗಳನ್ನು ಬೆಳಸಬೇಕು ಸಸ್ಯಗಳ ಗುಣಗಳನ್ನು ಶಿಕ್ಷಕರು ಮಕ್ಕಳಿಗೆ ಪರಿಚಯಿಸಬೇಕು ಮಕ್ಕಳಿಗೆ ಆಹಾರ ಆರೋಗ್ಯ ಹರಿವು ಇವು ಬಹಳ ಮುಖ್ಯವಾದವು ಪೋಷಕರು ಹಾಗೂ ಶಿಕ್ಷಕರು ಮಕ್ಕಳ ವಿದ್ಯಾಭ್ಯಾಸ ಕ್ಕೆ ಒತ್ತು ನೀಡುವ ಹಾಗೆ ಮಕ್ಕಳ ಆಹಾರ ಸೇವನೆಯ ಮೇಲೆಯೂ ಗಮನ ಹರಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಯುವ ಸನ್ಮಾನ್ ಪ್ರಶಸ್ತಿ ಪುರಸ್ಕೃತರಾದ ಚಿತ್ತಪ್ಪ ಯಾದವ್ ಮಾತನಾಡಿ ಗ್ರಾಮೀಣ ಮಟ್ಟದಲ್ಲಿ ಸಾಕ್ಷರತೆ ಪ್ರಮಾಣ ಕುಂಠಿತವಾಗಿದ್ದು, ರಾತ್ರಿಯ ಶಾಲೆಗಳು ಕಲಿಕಾ ಕೇಂದ್ರಗಳನ್ನು ಸ್ಥಾಪಿಸಿ ಗ್ರಾಮೀಣಭಾಗದಲ್ಲಿರುವ ಬಹುತೇಕ ಜನರನ್ನು ಮುಖ್ಯ ವಾಹಿನಿಗೆ ತರಬೇಕೆಂದರು.
ಮುಖ್ಯ ಶಿಕ್ಷಕರಾದ ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಿನ್ನಮ್ಮ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ರೈತ ಸಂಘದ ತಾಲೂಕು ಅಧ್ಯಕ್ಷರಾದ ರಂಗಸ್ವಾಮಿ, ರೈತ ಸಂಘದ ಮುಖಂಡರಾದ ಪ್ರಸನ್ನ, ಆವಿನಹಟ್ಟಿ ಸುರೇಶ್, ನಾಗರಾಜ್, ಶಾಲಾ ಶಿಕ್ಷಕರು, ಸಿಬಂಧಿ ವರ್ಗದವರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಾಕ್ಸ್..
ಸಮಾರಂಭದಲ್ಲಿ ವಿದ್ಯಾರ್ಥಿಗಳು ಹಾಡುಗಳಿಗೆ ನೃತ್ಯ ಮಾಡಿ ಎಲ್ಲರನ್ನು ರಂಜಿಸಿದರು ಹಾಗೂ ಶಾಲಾ ಆವರಣದಲ್ಲಿ ಕೋಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.
ಸಮಾರಂಭದ ಉದ್ಘಾಟನೆಯನ್ನು ಪುರಸಭೆಯ ಉಪಾಧ್ಯಕ್ಷರಾದ ಶ್ರೀ ಮತಿ ಹೆಚ್. ಆರ್. ನಾಗರತ್ನ ವೇದಮೂರ್ತಿ
ಗಿಡಕ್ಕೆ ನೀರು ಎರೆಯವುರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಾರಂಭದಲ್ಲಿ ವಿದ್ಯಾರ್ಥಿಗಳು ಹಾಡುಗಳಿಗೆ ನೃತ್ಯ ಮಾಡಿ ರಂಜಿಸಿದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030