ವರದಿ ನವೀನ್ ಅರಸನಘಟ್ಟ
ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದರೆ ಪರವಾನಿಗೆ ರದ್ದು
ಹೊಳಲ್ಕೆರೆ: ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದರೆ ಕೃಷಿ ಪರಿಕರ ಅಂಗಡಿ ಮಾಲೀಕರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್ ಎಚ್ಚರಿಸಿದರು
ಪಟ್ಟಣದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಮುಂಗಾರು ಹಂಗಾಮಿನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು
ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಬೇಕು ತಾಲೂಕಿನ ಕೆಲವು ಕಡೆ ಉತ್ತಮ ಮಳೆಯಾಗಿದ್ದು ಮುಂಗಾರು ಬಿತ್ತನೆ ಆರಂಭವಾಗಲಿದೆ ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಸಕಾಲದಲ್ಲಿ ಬೀಜ ಗೊಬ್ಬರ ವಿತರಿಸಬೇಕು ಎಂದರು
ರಸ ಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಎಂ ಆರ್ ಪಿ ದರಕ್ಕೆ ಮಾರಾಟ ಮಾಡಬೇಕು ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಬಾರದು ಎಂದು ಕೃಷಿ ಉಪ ನಿರ್ದೇಶಕ ಶಿವಕುಮಾರ್ ತಿಳಿಸಿದರು
ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ಸ್ಥಳೀಯ ಪರವಾನಿಗೆ ಹೊಂದಿರಬೇಕು ಕೃಷಿ ಪರಿಕರಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರಿಂದ ರೈತರಿಗೆ ತೊಂದರೆ ಉಂಟಾದರೆ ಕಾನೂನು ಕ್ರಮ ಜರುಗಿಸಲು ಅವಕಾಶ ಇದೆ ಎಂದು ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ಮಲ್ಲನಗೌಡ ಎಚ್ಚರಿಕೆ ನೀಡಿದರು
ಕೃಷಿ ಪರಿಕರ ಮಾರಾಟಗಾರರ ಅಧ್ಯಕ್ಷ ವೆಂಕಟೇಶ್ ಎಚ್ ಕೆ ಗೋಪಿಕೃಷ್ಣ ಕೃಷಿ ಅಧಿಕಾರಿಗಳಾದ ಆಶಾ ಮಂಜುನಾಥ್ ವೆಂಕಟೇಶ್ ಪ್ರದೀಪ್ ಸುರೇಶ್ ಹಾಗೂ ಕೃಷಿ ಪರಿಕರ ಮಾರಾಟಗಾರರು ಹಾಜರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030