ವೈದ್ಯಶ್ರೀ ಪ್ರಶಸ್ತಿಗೆ ಆಯ್ಕೆಯಾದ ಡಾ. ರಾಘವೇಂದ್ರ ಪ್ರಸಾದ್ ಜಿ. ಎಸ್…
ಹೊಸದುರ್ಗ: ವಿಜಯಪುರದಲ್ಲಿ ನೆಡೆದ 31ನೇ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಮ್ಮೇಳನದಲ್ಲಿ ವೈದ್ಯರನ್ನು ಗುರುತಿಸಿ ಅವರ ಉತ್ತಮ ಸೇವೆಯನ್ನ ಪರಿಗಣಿಸಿ ಅವರಿಗೆ “ವೈದ್ಯಶ್ರೀ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಾದ್ಯಂತ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ತಾಲೂಕು ಆರೋಗ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿ ಡಾ. ರಾಘವೇಂದ್ರ ಪ್ರಸಾದ್ ಜಿ. ಎಸ್. ಇವರ ಸೇವೆಯನ್ನು ರಾಜ್ಯ ಸರಕಾರ ಪರಿಗಣಿಸಿ ವೈದ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಆರೋಗ್ಯ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್, ರವರು ವೈದ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು…
ವರದಿ. ಪಾಲದೀಪ್ ಯಾದವ್ ಹಕ್ಕಿತಿಮ್ಮಯ್ಯನಹಟ್ಟಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030