ಹೊಸುದುರ್ಗ: ತಂಬಾಕು ಸೇವನೆ ದುಷ್ಪಾರಿಣಾಮ ಕುರಿತು ಜಾಗೃತಿ
ಚಿತ್ರದುರ್ಗ:ಹೊಸದುರ್ಗ ತಾಲ್ಲೂಕಿನ ಅಜ್ಜಂಪುರ ರಸ್ತೆಯ ನಗರ ಪ್ರದೇಶಗಳಲ್ಲಿ ಶುಕ್ರವಾರ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ಕೋಟ್ಪಾ-2023ರ ಕಾಯ್ದೆಯ ತಂಬಾಕು ಕಾರ್ಯಾಚರಣೆ ಕುರಿತು ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನ 2.0 ಅಂಗವಾಗಿ ಯುವಕರಿಗೆ ಮತ್ತು ಅಂಗಡಿಗಳ ಮಾಲೀಕರಿಗೆ ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ ನಡೆಸಲಾಯಿತು.
ಯುವ ಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ, ತಂಬಾಕು ಕಾರ್ಯಾಚರಣೆ ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 14 ಕೇಸುಗಳನ್ನು ದಾಖಲಿಸಿ ರೂ. 1250 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 07 ಕೇಸುಗಳನ್ನು ದಾಖಲಿಸಿ ರೂ. 550 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದರಾಮಪ್ಪ, ಪುರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಇದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030