ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ದಿನಾಂಕ 13.2 .2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲ್ಲೂಕು
ಅರಣ್ಯ ಪ್ರದೇಶಕ್ಕೆ ಬೆಂಕಿ ಸ್ಥಳೀಯರಿಂದ ರಕ್ಷಣೆ
ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಿಂದ ಗುಂಡುಮುಣುಗು ಮಾರ್ಗವಾಗಿ ಹುರುಳಿಹಾಳು ಮೊಳಕಾಲ್ಮೂರು ಹೋಗುವ ರಸ್ತೆಯ ಬದಿಯಲ್ಲಿರುವ ಗುಂಡುಮುಣುಗು ಹುರುಳಿಹಾಳು ಗ್ರಾಮದ ಮಧ್ಯೆ ಇರುವ ಅರಣ್ಯ ಪ್ರದೇಶಕ್ಕೆ ಶುಕ್ರವಾರ ಸಂಜೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದರು. ಅರಣ್ಯ ಪ್ರದೇಶಕ್ಕೆ ಬೆಂಕಿ ಇಟ್ಟ ಸುದ್ದಿ ಸಮೀಪದ ಗುಂಡು ಮುಳುಗಿನ ಗ್ರಾಮಸ್ಥರಿಗೆ ಗೊತ್ತಾಗುತ್ತಿದ್ದಂತೆ ಇದೇ ಊರಿನ ಪ್ರಥಮ ದರ್ಜೆ ಗುತ್ತಿಗೆದಾರರಾದ ಕೆ ತಿಪ್ಪೇಸ್ವಾಮಿಯವರ ನೀರಿನ ಟ್ಯಾಂಕರ್ ಗಳನ್ನು ತೆಗೆದುಕೊಂಡು ಹೋಗಿ ಗುಂಡುಮುಣುಗು ಗ್ರಾಮಸ್ಥರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030