ಇಟ್ಟಿಗಿ ಗ್ರಾ ಪಂ ಯಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ…!!!

Listen to this article

ಇಟ್ಟಿಗಿ ಗ್ರಾ ಪಂ ಯಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ…

ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ನಮ್ಮ ಭಾರತವು ವೈವಿಧ್ಯತೆ ಯಲ್ಲಿ ಏಕತೆಯನ್ನು ಜಗತ್ತಿಗೆ ಸಾರುವ ಮೂಲಕ ಪ್ರಜಾಪ್ರಭುತ್ವದ ಮೂಲ ಉದ್ದೇಶ ವನ್ನು ಸಾರುತ್ತಿರುವ ಮಾದರಿ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಎಂದರೆ ಪ್ರಜೆಗಳ ಆಳ್ವಿಕೆ. ಸಂವಿಧಾನ ಎಂದರೆ ಹಕ್ಕುಗಳು, ಕರ್ತವ್ಯಗಳು, ತತ್ವಗಳು ಮತ್ತು ಕಾನೂನಿನ ಮೂಲಕ ಪ್ರಜಾ ಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯುವ ಪವಿತ್ರ ಗ್ರಂಥ. ಈ ಆಶಯದೊಂದಿಗೆ ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು “ನಾವು ಭಾರತದ ಜನರು’ ಎಂಬ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸುವ ಕರ್ನಾಟಕ ಸರ್ಕಾರದ ಅಭಿಯಾನ ಒಂದು ಮಹತ್ವದ ಹೆಜ್ಜೆಯಾಗಿದೆ.ಈ ಕಾರ್ಯಕ್ರಮವನ್ನು ದಿನಾಂಕ15ನೇ ಸೆಪ್ಟೆಂಬರ್ ರಂದು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕಿನಲ್ಲಿ ಇಟ್ಟಿಗಿ ಗ್ರಾ ಪಂ ಯಲ್ಲಿ ನೆಡೆಯಿತು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮ ಈ ಒಂದು ಕಾರ್ಯಕ್ರಮದಲ್ಲಿ ಇಟ್ಟಿಗಿ ಗ್ರಾ ಪಂ ಅಧ್ಯಕ್ಷರಾದ ಬಿಷ್ಟ್ರನಗೌಡ್ರು ಸಿದ್ದಪ್ಪ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಪವಿತ್ರ ಎ ರವರು ಗ್ರಾ ಪಂ ಸಿಬ್ಬಂದಿಗಳು, ಜೈ ಭೀಮ್ ಯುವಕರ ಸದಸ್ಯರುಗಳು,ಗ್ರಾಮದ ನಾಗರೀಕರು ಪಾಲ್ಗೊಂಡಿದ್ದರು…

ವರದಿ-ಪ್ರಕಾಶ್ ಆಚಾರ್ ಇಟ್ಟಿಗಿ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend