ಮೂರ್ತಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದ ಕಿಡಿಗೇಡಿಗಳ ಬಂಧನಕ್ಕೆ ವೀರಶೈವ ಸಮಾಜ ವತಿಯಿಂದ ಅಗ್ರಹ :
ಜೇವರ್ಗಿ: ಬಸವೇಶ್ವರ ವೃತ್ತದಲ್ಲಿ ತಾಲೂಕು ವೀರಶೈವ ಸಮಾಜದ ಅಧ್ಯಕ್ಷರಾದ ಸಿದ್ದು ಅಂಗಡಿ ಮತ್ತು ಮಾಜಿ ಶಾಸಕರು ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ರವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ವಿಶ್ವಗುರು ಮಹಾ ಮಾನವತಾವಾದಿ ಶ್ರೀ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಮತ್ತು ಶ್ರೀ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳಿಗೆ ಆದ ಅವಮಾನ ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲ್ಲೂಕು ದಂಡಾಧಿಕಾರಿಗಳಾದ ವಿನಾಯಕ ಪಾಟೀಲ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜಕೀಯ ಪಕ್ಷದ ಮುಖಂಡರುಗಳು, ವಿವಿಧ ಸಮಾಜದ ಮುಖಂಡರುಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು ಭಾಗಿಯಾಗಿದ್ದರು …
ವರದಿ. ಬಸವರಾಜ್, ಹಿರೇಮಠ್, ಕಲಬುರ್ಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030