ಡಾ. ಬಾಬು ಜಾಗಜೀವನರಾಂ ಪುಣ್ಯಸ್ಮರಣೆ ಡಿಸಿ ಗೌರವ ನಮನ.
ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ: ಬಾಬು ಜಗಜೀವನರಾಂ ರವರ 36ನೇ ಪುಣ್ಯತಿಥಿ ನಿಮಿತ್ಯ ಇಂದು ಕಲಬುರ್ಗಿ ನಗರದ ಟೌನ್ ಹಾಲ್ ಬಳಿ ಪ್ರತಿಮೆಗೆ ಜಿಲ್ಲಾಧಿಕಾರಿಗಳು ಯಶವಂತ್ ವಿ ಗುರುಕರ್ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆಯ ಆಯುಕ್ತ ಭುವನೇಶ್ವರ ಪಾಟೀಲ್ ದೇವಿದಾಸ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂಎಸ್ ಅಲ್ಲಾಭಕ್ಷ್ ಸೇರಿದಂತೆ ಸಮಾಜದ ಮುಖಂಡರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು…..
ವರದಿ.ಬಸಯ್ಯ ಹಿರೇಮಠ್, ಕಲಬುರ್ಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030