ಕೌಲಗಿ ನೇತೃತ್ವದಲ್ಲಿ ಪ್ರಚಾರ ಜಾತ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ನಿಮಿತ್ತ ದಾವಣಗೆರೆಯಲ್ಲಿ ಆಗಸ್ಟ್ 3ರಂದು ಹಮ್ಮಿಕೊಂಡ ಅದ್ದೂರಿ ಸಮಾರಂಭ ಹಿನ್ನೆಲೆಯಲ್ಲಿ ಆಳಂದ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾಧ್ಯಕ್ಷ ಮಾಂತೇಶ್ ಕವಲಗಿ ನೇತೃತ್ವದಲ್ಲಿ ಪ್ರಚಾರ ಜಾಥಾ ನಡೆಯಿತು. ಮಾಂತೇಶ್ ಕೌಲಗಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರುರಾಜ್ಯ ಕಂಡ ಅಪರೂಪದ ರಾಜಕಾರಣಿ,ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿ ಹಾಗೂ ಜನತೆಗೆ ನೀಡಿದ ಹಲವು ಜನಪರ ಕಾರ್ಯಕ್ರಮಗಳು ಸಮಾಜದಲ್ಲಿ ಪರಿವರ್ತನೆ ತಂದಿದೆ. ರೈತರು. ಹಿಂದುಳಿದ ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯದ ಬಗೆಗೆ ವಿಶೇಷ ಕಾಳಜಿ ಹೊಂದಿರುವ ಸಮಾಜವಾದಿ ನಾಯಕ ಸಿದ್ದರಾಮಯ್ಯನವರ ಜನ್ಮದಿನದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಮಹಾಂತೇಶ್ ಕೌಲಗಿ ಅವರು ಮನವಿ ಮಾಡಿಕೊಂಡಿದ್ದಾರೆ..
ವರದಿ. ಬಸಯ್ಯ ಹಿರೇಮಠ್, ಕಲಬುರ್ಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030