ಕಾಂಗ್ರೆಸ್ ಪಕ್ಷ ಬೆಂಬಲಿಸಿ ಬದ್ಧತೆ ಮೆರೆದ ಮಸ್ಕಿ ವಿಧಾನಸಭಾ ಕ್ಷೇತ್ರ ಜನತೆಗೆ ಶುಭಾಶಯಗಳು…!!!

Listen to this article

*ಕಾಂಗ್ರೆಸ್ ಪಕ್ಷ ಬೆಂಬಲಿಸಿ ಬದ್ಧತೆ ಮೆರೆದ ಮಸ್ಕಿ ವಿಧಾನಸಭಾ ಕ್ಷೇತ್ರ ಜನತೆಗೆ ಶುಭಾಶಯಗಳು*
ಬಂಧುಗಳೆ, ಮಸ್ಕಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ *ಅಭಿವೃದ್ಧಿಗೆ ಕಾಂಗ್ರೆಸ್* ಎನ್ನುವ ನಾಣ್ನುಡಿಯನ್ನು ಮಸ್ಕಿ ಜನತೆ ನಿಜ ಮಾಡಿ ತೋರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ *ಆಪರೇಷನ್ ಕಮಲ* ಮೂಲಕ ಹಿಂಬಾಗಿಲ ಮೂಲಕ ಅಧಿಕಾರ ಸ್ಥಾಪಿಸಿದ್ದ ಬಿಜೆಪಿ ಸರ್ಕಾರಕ್ಕೆ ಈ ಉಪ ಚುನಾವಣೆಯಲ್ಲಿ ಸೋಲುಣಿಸುವ ಮೂಲಕ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹಳ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಸ್ಕಿ ಉಪ ಚುನಾವಣೆಯಲ್ಲಿ ರಾಜ್ಯದ ಹಾಲಿ ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ ಡಿ ಕೆ ಶಿವಕುಮಾರ್ ರವರು ಆದಿಯಾಗಿ ಅನೇಕ ಕಾಂಗ್ರೆಸ್ ನಾಯಕರೊಂದಿಗೆ ನಾನು ಸಹ ಸತತ 05 ದಿನಗಳ ಕಾಲ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಬಸವನ ಗೌಡ ತುರುವಿಹಾಳ ರವರ ಪರವಾಗಿ ಪ್ರಚಾರ ಕೈ ಕೈಗೊಂಡಿದ್ದೆನು. ಪ್ರಚಾರದ ಸಂದರ್ಭದಲ್ಲಿ ನಾನು ಅನೇಕ ತಾಂಡಗಳಿಗೆ ಭೇಟಿ ಕೊಟ್ಟು ಮತಯಾಚನೆ ಮಾಡಿದ್ದು, ಜನತೆ ಉತ್ತಮ ಪ್ರತಿಕ್ರಿಯೆ ತೋರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಬದ್ಧತೆಯನ್ನು ಮೆರೆದಿರುವುದು ಮನಸ್ಸಿಗೆ ಬಹಳ ಸಂತಸ ಉಂಟು ಮಾಡಿದೆ. ಬರೀ ಸುಳ್ಳು ಆಶ್ವಾಸನೆಗಳ ಮೂಲಕ ಜನತೆಯ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ಪಕ್ಷವನ್ನು ಜನತೆ ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಪಕ್ಷದ ಕೈ ಹಿಡಿದದ್ದಕ್ಕಾಗಿ ನಾನು ಮಸ್ಕಿ ವಿಧಾನಸಭಾ ಕ್ಷೇತ್ರದ ಸಮಸ್ತ ಮತ ಬಾಂಧವರಿಗೆ ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತಾ, ವಿಜೇತ ಅಭ್ಯರ್ಥಿ ಶ್ರೀ ಬಸವನ ಗೌಡ ತುರುವಿಹಾಳ ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಿ ನಿಮ್ಮ : *ಎಸ್ ಭೀಮನಾಯ್ಕ, ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ.*

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend