ವಿಜ್ರಂಭಣೆಯಿಂದ ಸೊನ್ನೆ ಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಹೊರವಲಯದ ಹೊನ್ನಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಮಾರ್ಗಸೂಚಿಗಳ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶ್ರೀ ವೀರಭದ್ರೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿಗೆ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು.
ಸ್ವಾಮಿಯ ರಥದ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ .ಎಸೆದು ಭಕ್ತಿ ಸಮರ್ಪಿಸಿದರು.
ಶ್ರೀ ಸ್ವಾಮಿಯ ಪಟ್ಟವನ್ನು ಅಬ್ಬೇನಹಳ್ಳಿ ಗ್ರಾಮದ ಎಂಪಿ ರೇವಣ್ಣ ಇವರಿಗೆ ರೂಪಾಯಿ 31000.ಕ್ಕೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಹುಲಿಕೆರೆ ಹಿರೇಕುಂಬಳಗುಂಟೆ ದಾಸರು ಬನಹಳ್ಳಿ ಹೊಸಹಳ್ಳಿ ಜಗಳೂರು ಮೊಳಕಲ್ಮುರು ಸೇರಿ ಇತರೆ ಜಿಲ್ಲೆಗಳ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು..
ವರದಿ. ವಿರೇಶ್, ಕೆ, ಎಸ್,ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030