ವಿಜಯನಗರ: ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಹೋಬಳಿಯ ಕುಲುಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯ ದತ್ತ ಶಾಲಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಂದು ಮಗುವನ್ನು ವೈಯಕ್ತಿಕ ಕಾಳಜಿವಹಿಸಿ ಗುಣಾತ್ಮಕ ಶಿಕ್ಷಣ ನೀಡಬೇಕು ಈ ನಿಟ್ಟಿನಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ,
ಮಕ್ಕಳಲ್ಲಿನ ಪ್ರತಿಭೆ ಗುರಿತಿಸಿ, ಗುಣಾತ್ಮಕ ಶಿಕ್ಷಣ
ನೀಡುವ ಮೂಲಕ ಸರಕಾರಿ ಶಾಲೆಯಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂಬುದನ್ನು ಶಿಕ್ಷಕರು ನಿರೂಪಿಸಬೇಕಿದೆ. ಆದರಿಂದ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಸಮುದಾಯ ದತ್ತ ಶಾಲಾ ಮಾರ್ಗದರ್ಶಕ ಶಿಕ್ಷಕ ಎನ್.ಡಿ. ಮಹಾದೇವ ಹೇಳಿದರು. ಇದೇ ಸಂಧರ್ಭಲ್ಲಿ ಮಕ್ಕಳ ದಾಕಲಾತಿ ಹೆಚ್ಚಿಸುವ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂಧಭ್ರದಲ್ಲಿ ಬಡ್ತಿಮುಖ್ಯಶಿಕ್ಷಕ ಜೀಲನ್ ಭಾಷಾ, ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗಭೂಷಣ, ಸದಸ್ಯ ವೀರಭದ್ರಪ್ಪ, ಗ್ರಾಮ ಪಂಚಾಯ್ತಿ ಸದಸ್ಯರಾದ ಶಿವಕುಮಾರ್, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು…
ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030