ವಿಜ್ರಂಭಣೆಯಿಂದ ಶ್ರೀ ಸಂಗಮೇಶ್ವರ ಸ್ವಾಮಿಯ ರಥೋತ್ಸವ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಎಸ್ ಇಮಡಪುರ ಶ್ರೀ ಸಂಗಮೇಶ್ವರ ಸ್ವಾಮಿಯ ರಥೋತ್ಸವ ಮಾರ್ಗಸೂಚಿಗಳ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶ್ರೀ ಸಂಗಮೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು.
ಸ್ವಾಮಿಯ ರಥ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ ಬಾಳೆಹಣ್ಣು ಉತ್ತುತ್ತಿ ಮಂಡಿಸಿದ್ದು ಭಕ್ತಿ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಎಸ್ ಇಮಡಪುರ ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು..
ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030