ಆಟೋಗೆ ಕಾರ್ ಡಿಕ್ಕಿ ಪರಿಣಾಮ ಮೂವರಿಗೆ ಗಂಭೀರ ಗಾಯ…!!!

Listen to this article

ಕಾನಹೊಸಹಳ್ಳಿಯಿಂದ ಚಿಕ್ಕಜೋಗಿಹಳ್ಳಿ ಕಡೆ ತೆರಳುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಆಟೋ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಇಮಡಾಪುರ ಬಳಿಯ ರಾಷ್ತ್ರೀಯ ಹೆದ್ದಾರಿ -50ರಲ್ಲಿ ಭಾನುವಾರ ಮಧ್ಯಾಹ್ನ 1.40 ಗಂಟೆಗೆ ನಡೆದಿದೆ.

 

ಕೂಡ್ಲಿಗಿ ತಾಲೂಕಿನ ಅರ್ಜುನ ಚಿನ್ನೇನಹಳ್ಳಿ ಗ್ರಾಮದ ಓಬಯ್ಯ ಎನ್ನುವವರು ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕ ಎನ್ನಲಾಗಿದೆ. ಚಾಲಕ ಓಬಯ್ಯ ಅವರ ಎದೆ ಭಾಗ ಸೇರಿ ಇತರೆಡೆ ಗಂಭೀರ ಗಾಯಗಳಾಗಿದ್ದು, ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಿಂದ ಚಿಕ್ಕಜೋಗಿಹಳ್ಳಿ ಕಡೆ ಆಟೋ ಇಮಡಾಪುರ ಸಮೀಪ ರಾ.ಹೆ.-50 ರಲ್ಲಿ ತೆರಳುತ್ತಿದ್ದಾಗ ಬೆಂಗಳೂರಿನಿಂದ ವಿಜಯಪುರ ಕಡೆ ತೆರಳುತ್ತಿದ್ದ ಕಾರ್ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿ ಅವಘಡ ಸಂಭವಿಸಿದೆ. ಬೈಕ್ ವೊಂದು ಓವರ್ ಟೇಕ್ ಮಾಡಲು ಯತ್ನಿಸಿದಾಗ ಅದನ್ನು ತಪ್ಪಿಸಲು ಹೋಗಿ ಈ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರು ಮತ್ತು ಹೆದ್ದಾರಿ ಗ್ರೂಪ್ ಸಹಾಯಕರು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಎನ್ನುವ ಮಾಹಿತಿ ತಿಳಿದುಬಂದಿದೆ..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend