ಪೂಜಾರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಫೋಟೋ ಇಟ್ಟು ಹಾರವನ್ನು ಧರಿಸಿ ಪುಷ್ಪಹಾರ ಧರಿಸುವುದರ ಮುಖಾಂತರ ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ. ನಾರಾಯಣಪ್ಪ.ರವರು ಅಂದು ಕನ್ನಡ ನಾಡಿನ ವೀರ ಮಹಿಳೆಯಾಗಿ ಕಿತ್ತೂರು ರಾಣಿ ಚೆನ್ನಮ್ಮ ರವರು ಹೋರಾಡಿ ನಮ್ಮ ದೇಶದ ಸ್ವಾತಂತ್ರದಲ್ಲಿ ಭಾಗಿಯಾಗಿದ್ದಾರೆ.
ಆ ಸ್ವತಂತ್ರವನ್ನು ನಾವು ನೀವುಗಳೆಲ್ಲರೂ ಸೇರಿ ಉಳಿಸಿಕೊಂಡು ಹೋಗೋಣ ಎಂದು ಈ ಸಂದರ್ಭದಲ್ಲಿ ಮಾತನಾಡಿದರು ಈ ವೇಳೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ. ಶಿಲ್ಪ. ಎನ್. ಜಿ. ಬಸಪ್ಪ ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಎಲ್ಲಾ ಸರ್ವ ಸದಸ್ಯರುಗಳು ಮಾಜಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಮಾಜಿ ಸದಸ್ಯರುಗಳು ಸಮಾಜಸೇವಕರು ಊರಿನ ಮುಖಂಡರುಗಳು ಪಂಚಾಯಿತಿ ಸಿಬ್ಬಂದಿಗಳು ಹಾಗೂ ಲೈಬ್ರರಿ ಮುಖ್ಯಸ್ಥರು ಈ ಒಂದು ಜಯಂತಿಯಲ್ಲಿ ಇದ್ದರು.
ವರದಿ: ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030