ಹೊಸಹಳ್ಳಿ ಗ್ರಾಮದಲ್ಲಿ ಅದ್ದೂರಿ ಕಿತ್ತೂರಾಣಿ ಚೆನ್ನಮ್ಮ ಜಯಂತೋತ್ಸವ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸ ಹಳ್ಳಿ ಹೋಬಳಿಯ ರಾಷ್ಟ್ರೀಯ ಹೆದ್ದಾರಿ 50 ರ ಪಕ್ಕದಲ್ಲಿ ಕಿತ್ತೂರ್ ರಾಣಿ ಚೆನ್ನಮ್ಮ ವೃತ್ತದಲ್ಲಿ ಕಾರ್ಯಕ್ರಮದ ಆಯೋಜಿಸಿದ್ದು.
ದೇಶದ ಮೊದಲ ಮಹಿಳಾ ಸ್ವತಂತ್ರ ಹೋರಾಟ ಗಾರ್ತಿ ಬ್ರಿಟಿಷರ ಎದೆಯಲ್ಲಿ ನಡುಕ ಹುಟ್ಟಿಸಿದ ಕನ್ನಡ ನಾಡಿನ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ ಸಾಹಸ ಹೋರಾಟ ತ್ಯಾಗ ಬಲಿದಾನ ಈ ನಾಡಿಗೆ ಮಾದರಿಯಾಗಿದೆ .
ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಮುಖಂಡರು ಮಹಿಳೆಯರು ಯುವಕರು ಸೇರಿದಂತೆ ಪೂಜಿಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದ ನಂತರ ಹೊಸಹಳ್ಳಿಯ ಪ್ರಮುಖ ಬೀದಿಗಳಲ್ಲಿ ಸಕಲ ಮಂಗಳವಾದ್ಯಗಳೊಂದಿಗೆ ಕಿತ್ತೂರು ರಾಣಿ ಚೆನ್ನಮ್ಮ ರವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜನಪ್ರತಿನಿಧಿಗಳು ಪಂಚಮಸಾಲಿ ಸೇರಿದಂತೆ ವಿವಿಧ ಸಮುದಾಯದ ಮುಖಂಡರುಗಳು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಎಲ್ಲಾ ವಿವಿಧ ಸಂಘಟನೆಗಳ ಮುಖಂಡರುಗಳು ಸೇರಿದಂತೆ ಹೊಸಹಳ್ಳಿ ಗ್ರಾಮದ ಸಾರ್ವಜನಿಕರು ಇತರರು ಉಪಸ್ಥಿತರಿದ್ದರು…
ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030