ಕಾನೂನು ಅರಿವು ನೆರವು ಕಾರ್ಯಕ್ರಮ..
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಳ್ಳಿಯಲ್ಲಿ 75ನೇ ಸ್ವತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಕೂಡ್ಲಿಗಿ ವಕೀಲರ ಸಂಘ ಇವರ ನೇತೃತ್ವದಲ್ಲಿ
ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಕಾನೂನು ನೆರವು-ಅರಿವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮ ದ ಉದ್ಘಾಟನೆಯನ್ನು
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಣ್ಣ ನೆರವೇರಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ವಕೀಲರಾದ ಶರಣಗೌಡರು. ಪರಸಪ್ಪ. ಹಾರಕಬಾವಿ ಅಂಗಡಿ ರವಿ. ಚೆನ್ನಪ್ಪ. ಕೊಟ್ರೇಶ್. ಇವರುಗಳು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಕುರಿತು ಸವಿಸ್ತಾರವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸಣ್ಣ. ಉಪತಹಶೀಲ್ದಾರ್ ಚಂದ್ರಮೋಹನ್. ಪಿಡಿಒ ಬಸಮ್ಮ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು ತಪಸ್ವಿನಿ. ಹೊಸಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಗೋವಿಂದಪ್ಪ. ಹಾಗೂ ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸರ್ವ ಸದಸ್ಯರು ಸಿಬ್ಬಂದಿ ವರ್ಗ ಸಾರ್ವಜನಿಕರು ಉಪಸ್ಥಿತರಿದ್ದರು…..
ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030