ಕುಡುತಿನಿ ಪಟ್ಟಣದಲ್ಲಿ ಮತದಾನ ಜಾಗೃತಿ ಅಭಿಯಾನ…!!!

Listen to this article

ಕುಡುತಿನಿ ಪಟ್ಟಣದಲ್ಲಿ ಮತದಾನ ಜಾಗೃತಿ ಅಭಿಯಾನ

ಬಳ್ಳಾರಿ:ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ಸಾರ್ವಜನಿಕರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಕುಡುತಿನಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಗುರು ಪ್ರಸಾದ್ ಅವರು ಹೇಳಿದರು.


ಮಂಗಳವಾರ, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುಡತಿನಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಂಯುಕ್ತಾಶ್ರಯದಲ್ಲಿ ಪ್ರಜಾ ಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ ಎನ್ನುವ ಘೋಷ ವಾಕ್ಯದಡಿ ಕುಡುತಿನಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಅರಿವು ಅಭಿಯಾನದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು. ಯಾರೂ ಮತದಾನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಬಾರದು. ನಿಮ್ಮ ಅಮೂಲ್ಯ ಮತವು ಪಟ್ಟಣದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಕರೆ ನೀಡಿದರು.


ಪಟ್ಟಣದ ವ್ಯಾಪ್ತಿಯಲ್ಲಿ ಕಳೆದ ಬಾರಿ ಕಡಿಮೆ ಮತದಾನಗೊಂಡ ಬೂತ್‍ಗಳಲ್ಲಿ ಸಂಚರಿಸಿ ಮೇ.07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ದಿನದಂದು ಖಡ್ಡಾಯವಾಗಿ ಮತ ಚಲಾಯಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend