ಕೂಡ್ಲಿಗಿ ಮಹಾದೇವ ಮೈಲಾರ ಕ್ರೀಡಾoಗಣ ಉಳಿಸಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ!!!! ಕೂಡ್ಲಿಗಿ: ತಾಲೂಕಿನ ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆಟದ ಮೈದಾನವನ್ನು ಉಳಿಸುವ ಸಲುವಾಗಿ ಕೆಲವು ದಿನಗಳಿಂದ ನಡೆಯುತ್ತಿರುವ ಈ ಮೈದಾನ ಉಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಬೆಂಬಲಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷರಾದ ವೀರ ಸಂಗಯ್ಯನವರು ಬೆಂಬಲ ಸೂಚಿಸಿದರು ಹಾಗೂ ಕೂಡ್ಲಿಗಿ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಈ ಮಹಾದೇವ ಮೈಲಾರ ಕ್ರೀಡಂಗಣ ಉಳಿಸಿ ಬೆಳೆಸುವ ಮೂಲಕ ಇಡೀ ರಾಜ್ಯದಲ್ಲೇ ರಾಜ್ಯ ರೈತ ಸಂಘದವರು ಮೈದಾನ ಉಳಿಸಿ ಹೋರಾಟಕ್ಕೆ ನಾವುಗಳು ಸದಾ ನಿಮ್ಮೊಂದಿಗೆ ಇರುತ್ತೇವೆ ಎಂದು ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು. ವಿಜಯನಗರ ಜಿಲ್ಲೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಎಂ ಬಸವರಾಜ ಮಾತನಾಡಿ ಸರ್ಕಾರಿ ಶಾಲೆಯ ಮೈದಾನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಇಲ್ಲಿನ ಕ್ರೀಡಾಂಗಣವನ್ನು ಕಬ್ಬಳಿಸುವುದಕ್ಕೆ ಹುನ್ನಾರ ನಡೆಸುತ್ತಿರುವುದು ಖಂಡನೀಯ ಮತ್ತು ಇಡೀ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಮಹದೇವ ಮೈಲಾರ ಕ್ರೀಡಾಂಗಣವನ್ನು ಉಳಿಸುವುದಕ್ಕೆ ಪ್ರತಿಯೊಬ್ಬರೂ ಬೆಂಬಲ ಸೂಚಿಸಿ ಈ ಮೈದಾನದ ಜಾಗವನ್ನು ಶಾಲೆಯ ಸುಪರ್ದಿಗೆ ನೀಡುವಂತೆ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು ಹಾಗೂ ಈ ಸಂದರ್ಭದಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಸಿದ್ದನಗೌಡ, ಯಶೋದಮ್ಮ, ಲಕ್ಷ್ಮಿ ದೇವಿ, ಕೂಡ್ಲಿಗಿ ತಾಲೂಕು ರೈತ ಸಂಘದ ಅಧ್ಯಕ್ಷ ಚನ್ನಬಸಪ್ಪ, ಕಾಳಪ್ಪ, ಚನ್ನಬಸಪ್ಪ, ಹಾಲಸ್ವಾಮಿ, ರಮೇಶ್ ನಾಯಕ, ಶೇಖರ್ ನಾಯ್ಕ, ದುರ್ಗಪ್ಪ, ರಮೇಶಣ್ಣ, ಕೂಡ್ಲಿಗಿ ತಾಲೂಕಿನ ರೈತ ಮುಖಂಡರುಗಳು ಇತರರು ಇದ್ದರು.
ವರದಿ. ಬಸಪ್ಪ ಬಣವಿಕಲ್ಲು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030