ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುರಾಜ್ ನಾಯಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರ ಅಭಿಮಾನಿಗಳ ಒತ್ತಾಯ!!!!! ಗುರುರಾಜ್ ನಾಯಕ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಕಾರಣ ಗುರುರಾಜ್ ನಾಯಕ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗುರುರಾಜ್ ನಾಯಕ ಅವರಿಗೆ ಒತ್ತಾಯಿಸಿದ್ದಾರೆ. ಇಂದು ಕೂಡ್ಲಿಗಿ ಯಲ್ಲಿ ನಡೆದ ಕಾಂಗ್ರೆಸ್ ಟಿಕೆಟ್ ವಂಚಿತ ಗುರುರಾಜ್ ನಾಯಕ ಅವರ ಅಪಾರ ಅಭಿಮಾನಿ ಬಳಗ ಹಾಗೂ ಕೂಡ್ಲಿಗಿ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗುರುರಾಜ್ ನಾಯಕ ಅವರಿಗೆ ಒತ್ತಾಯಿಸಿ, ಸುಮಾರು 5 ವರ್ಷಗಳಿಂದ ಕೂಡ್ಲಿಗಿ ಕ್ಷೇತ್ರದಲ್ಲಿ ಸಮಾಜ ಸೇವೆ ಮೂಲಕ ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಾ, ದೂರದ ಅಮೆರಿಕ ದೇಶದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಇವರು ಈಗಾಗಲೇ ಕ್ಷೇತ್ರದಲ್ಲಿ ಮನೆಮಾತಾಗಿದ್ದಾರೆ. ಗುರುರಾಜ್ ನಾಯಕ ಅವರು ಕೊರೋನಾ ಸಂದರ್ಭದಲ್ಲಿ ಕ್ಷೇತ್ರದ ಹಳ್ಳಿಗಳ ಬಡ ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ಟುಗಳನ್ನು ನೀಡುವುದರ ಮೂಲಕ ತಮ್ಮದೇ ಆದ ರೀತಿಯಲ್ಲಿ ಜನಮನ್ನಣೆ ಗಳಿಸಿದ್ದಾರೆ ಎಂದು ಸೂಲದಹಳ್ಳಿ ಗ್ರಾಮದ ಯುವ ಕಾಂಗ್ರೆಸ್ ಕಾರ್ಯಕರ್ತ ಹನುಮೇಶ ನಾಯಕ ತಿಳಿಸಿದರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ವಿಜಯನಗರ ಜಿಲ್ಲಾ ಕಾರ್ಯದರ್ಶಿ ಬಿ.ಎಂ.ಬಸವರಾಜ ಬಣವಿಕಲ್ಲು ಇವರು ಮಾತನಾಡಿ ಈಗಾಗಲೇ ನಮ್ಮ ಕೂಡ್ಲಿಗಿ ಕ್ಷೇತ್ರದಲ್ಲಿ ಸಮಾಜ ಸೇವೆ ಮೂಲಕ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ, ಆಗಾಗಿ ಈ ಬಾರಿ ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದರು, ಆದರೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಗುರುರಾಜ್ ನಾಯಕ ಅವರಿಗೆ ಒತ್ತಾಯಿಸಿದ್ದೇವೆ. ಈ ಸಭೆಯ ಮೂಲಕ ತಿಳಿಸಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಸುಮಾರು 30 ಹಳ್ಳಿಗಳ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು….
ವರದಿ. ಎಚ್ಚರಿಕೆ ಕನ್ನಡ ನ್ಯೂಸ್ ವರದಿಗಾರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030