ಕೂಡ್ಲಿಗಿ:ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ- ಶಾಸಕ ಡಾ”ಎನ್.ಟಿ.ಶ್ರೀನಿವಾಸ್- ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ, ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಎಂದು ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ಕರೆ ನೀಡಿದರು. ಅವರು ಆ30ರಂದು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಹಾಗೂ ಶಿಕ್ಷಣ ಇಲಾಖೆ ಕೂಡ್ಲಿಗಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ. 2023 – 24 ನೆಯ ಸಾಲಿನ ಕೂಡ್ಲಿಗಿ ತಾಲೂಕು ಮಟ್ಟದ, ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು, ಕ್ರೀಡಾ ಜ್ಯೋತಿಯನ್ನು ಉದ್ಘಾಟಿಸಿ ಮಾತನಾಡಿದರು.
ನಿನ್ನೇ ದಿನ ಅಂದರೆ ಆ29 ರಂದು ನಾವುಗಳು, ವಿಶ್ವ ಕ್ರೀಡಾಕೂಟ ದಿನವನ್ನಾಗಿ ಆಚರಿಸುತ್ತಿದ್ದೇವೆ. ಅದಕ್ಕಾಗಿ ಎಲ್ಲಾ ಕ್ರೀಡಾಪಟಗಳಿಗೆ ಹಾಗೂ ಸಾಧಕರಿಗೆ ದೈಹಿಕ ಶಿಕ್ಷಕರಿಗೆ, ಹಾಗೂ ಸರ್ವರಿಗೂ ತಡವಾಗಿ ಈ ಮೂಲಕ ಶುಭಾಶಯಗಳನ್ನು ಕ್ರೀಡಾ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದರು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ, ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ. ಯುವ ಪೀಳೆಗೆ ಕ್ರೀಡಾ ಕೂಟದಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವುದರ ಮೂಲಕ, ನಮ್ಮ ತಾಲೂಕು, ನಮ್ಮ ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಅವರು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಕೂಡ್ಲಿಗಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಹಿರೇಮಠ ವಿದ್ಯಾಪೀಠ ಪದವಿ ಪೂರ್ವ ಕಾಲೇಜು, ಹಾಗೂ ಶ್ರೀ ರೇಣುಕಾ ಸಂಯುಕ್ತ ಪದವಿ ಪೂರ್ವ ಕಾಲೇಜು. ಸೇರಿದಂತೆ ವಿವಿದ ಕಾಲೇಜುಗಳ ವಿದ್ಯಾರ್ಥಿಗಳು, ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡಿದ್ದರು. ಶಿಕ್ಷಣ ಇಲಾಖಾಧಿಕಾರಿಗಳು ಸೇರಿದಂತೆ,
ವಿವಿಧ ಇಲಾಖೆಗಳ ಅಧಿಕಾರಿಗಳು. ವಿವಿದ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಅಧ್ಯಾಪಕರು. ನೂರಾರು ಕ್ರೀಡಾಪಟುಗಳು, ವಿವಿದ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ದೈಹಿಕ ಶಿಕ್ಷಕರು ಮತ್ತು ಕ್ರೀಡಾ ಮಾರ್ಗದರ್ಶಕರು, ಕ್ರೀಡಾ ಅಭಿಮಾನಿಗಳು ಪಾಲ್ಗೊಂಡಿದ್ದರು. ವಿವಿದ ಗಣ್ಯರು, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಮತ್ತು ವಿವಿದ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು….
ವರದಿ,ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030