ಕೂಡ್ಲಿಗಿ:ಡಾ॥ಬಿ.ಆರ್.ಅಂಬೇಡ್ಕರ್ ಜಯಂತಿ-ವಿಜಯನಗರ ಜಿಲ್ಲೆ ಕೂಡ್ಲಿಗಿ:ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಎ14ರಂದು ಸಂವಿಧಾನ ಶಿಲ್ಲಿ ಡಾ॥ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಯಿತು. ಕೂಡ್ಲಿಗಿ ಪಟ್ಟಣದೆಲ್ಲೆಡೆ ಸೇರಿದಂತೆ ತಾಲೂಕಿನ ತುಂಬರಗುದ್ದಿ, ಹೊಸಹಳ್ಳಿ ಕೂಡ್ಲಿಗಿ ಗುಡೇಕೋಟೆ ಹೋಬಳಿಗಳಲ್ಲಿ. ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಎಲ್ಲಾ ಗ್ರಾಮಗಳ ಪ್ರಮುಖ ವೃತ್ತಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ. ವಸತಿ ಶಾಲೆಗಳಲ್ಲಿ ಎಲ್ಲಾ ಕಚೇರಿಗಳಲ್ಲಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ. ಸರ್ಕಾರಿ ಕಚೇರಿಗಳು ಹಾಗೂ ಸೇವಾ ಕೇಂದ್ರಗಳಲ್ಲಿ, ಡಾ॥ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಗೌರ ಸಮರ್ಪಣೆ ಮಾಡಲಾಯಿತು. ದೇಶಕ್ಕೆ ಅಂಬೇಡ್ಕರ್ ರವರ ಕೊಡುಗೆ ಹಾಗೂ ಸಂವಿಧಾನದ ಮಹತ್ವದ ಕುರಿತು, ದಲಿತ ಮುಖಂಡರು ಸಾರ್ವಜನಿಕರಿಗೆ ಮಾಹಿತಿ ನೀಡೋ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದಲಿತ ಸಮಾಜದ ಪ್ರಮುಖರು ಹಾಗೂ ಜನಪ್ರತಿನಿಧಿಗಳು, ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ನಾಗರೀಕರು ಗಣ್ಯರು ಉಪಸ್ಥಿತರಿದ್ದರು….
ವರದಿ..ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030