ವಿಜಯನಗರ ಕೂಡ್ಲಿಗಿ ತಾಲೂಕಿನ ಹೂಡೇಂ ಪಂಚಾಯತಿ ವ್ಯಾಪ್ತಿಯಲ್ಲಿ (ಜೂ-6) ವಿಶ್ವ ಪರಿಸರ ದಿನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಸಿ ನೆಟ್ಟು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಅವರು ಮಾತನಾಡಿ ಹೂಡೇಂ ಪಂಚಾಯತಿ ವ್ಯಾಪ್ತಿಯ ಕ್ಷೇತ್ರ ಬದು ನಿರ್ಮಾಣಕ್ಕೆ 4000 ಸಾವಿರ ಸಸಿಗಳನ್ನು ನಾಟಿ ಮಾಡಲು ರೈತರಿಗೆ ಅವಕಾಶ ನೀಡಲಾಗುತ್ತೆ. ಪೋಷಿಸುವ ಮೂಲಕ ಅರಣ್ಯ ಬೆಳೆಸಬೇಕು. ಮನೆಯ ಅಕ್ಕ–ಪಕ್ಕ ಗಿಡಗಳನ್ನು ಬೆಳೆಸುವುದರಿಂದ ಉತ್ತಮ ಗಾಳಿ, ನೆರಳು, ಮಳೆ, ದೊರಕುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಎಂ ಕರಿಬಸಮ್ಮ-ದುರುಗಪ್ಪ, ಉಪಾಧ್ಯಕ್ಷರಾದ ಶ್ರೀ ಕೆ ಎನ್ ರಾಘವೇಂದ್ರ, ಸದಸ್ಯರಾದ ರಾಮಚಂದ್ರಪ್ಪ, ಕಾರ್ಯದರ್ಶಿ ಚಂದ್ರಪ್ಪ, ಬಿಲ್ ಕಲೆಕ್ಟರ್ ತಿಪ್ಪೇರುದ್ರಪ್ಪ, ಗ್ರಂಥಪಾಲಕರು ಗುರುರಾಜ್, ಅಂಗನವಾಡಿ ಕಾರ್ಯಕರ್ತ ಗಂಗಮ್ಮ, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030