ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು
ತಾಲೂಕಿನ ಹಿರೇಕುಂಬಳಗುಂಟೆ ಗ್ರಾಮ ಪಂಚಾಯಿತಿ ವತಿಯಿಂದ ಹಿರೇಕುಂಬಳಗುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 19 ವರ್ಷ ಮೇಲ್ಪಟ್ಟವರೆಲ್ಲರು ಕರೋನಾ ವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ ರಮೇಶ್ ರವರು ಮಾತನಾಡಿ, ಆದಷ್ಟು 18 ವರ್ಷ ಮೇಲ್ಪಟ್ಟ ವರೆಲ್ಲರು ವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಿಕೊಂಡು ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ಎಂದು ಇತರರಿಗೂ ಹೇಳಿ ಧೈರ್ಯ ತುಂಬಿ ವ್ಯಾಕ್ಸಿನ್ ಹಾಕಿಕೊಳ್ಳುವಂತೆ ಮನವೊಲಿಸಬೇಕು ಎಂದು ಹೇಳಿದರು. ಇತ್ತೀಚೆಗೆ ವೈರಸ್ ಹರಡುವಿಕೆ ಸ್ವಲ್ಪ ಕಡಿಮೆ ಪ್ರಮಾಣ ವಾಗುತ್ತಿದ್ದು ಜನರಲ್ಲಿ ಸ್ವಲ್ಪ ಸಮಾಧಾನ ತಂದಿದೆ ಕಾರಣ ಪ್ರತಿಯೊಬ್ಬರೂ ಸ್ವಯಿಚ್ಛೆಯಿಂದ ಬಂದು ಕರೋನ ಲಸಿಕೆಯನ್ನು ಪಡೆಯಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್ ರವರು ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ ಪ್ರತಿಯೊಂದು ಗ್ರಾಮಗಳಿಗೆ ತಮ್ಮ ಇಲಾಖೆಯ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುತ್ತಾ ಲಸಿಕೆ ಹಾಕಿಸಿಕೊಳ್ಳಲು ಜಾಗೃತಿ ಮೂಡಿಸಿದರು. ಶಾಲೆಯ ಮುಖ್ಯಗುರುಗಳಾದ ಶಾಮಸುಂದರ ರವರು ಪ್ರತಿಯೊಬ್ಬರಿಗೂ ಕರೋನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ಧೈರ್ಯ ತುಂಬಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಎಸ್ಡಿಎ ಕೊಟ್ರೇಶ್, ಗ್ರಾಮ ಪಂಚಾಯಿತಿ ಸದಸ್ಯ ಕಾಶಿವಿಶ್ವನಾಥ ಗೌಡ, ಸಿಕೆ ಕುಂಟೆ ಮಂಜುನಾಥ್. A.N.M.ಸುಪ್ರಿಯ ಮೇಡಂ, ಹರೀಶ್, ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030