ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಭೇಟಿ:— ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಭಾನುವಾರ ಸಂಜೆ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್. ಆರ್ ಪಾಟೀಲ್ ಭೇಟಿ ನೀಡಿ ಉಜ್ಜಿನಿ ಕ್ಷೇತ್ರದ ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯ ದರ್ಶನಪಡೆದು ನಂತರ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರಿಂದ ಆಶೀರ್ವಾದ ಪಡೆದರು. ಈಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಯೋಗಿಸ್ವಾಮಿ, ಕೂಡ್ಲಿಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ಸಿದ್ದನಗೌಡ, ಗುಳಿಗಿ ವೀರೇಂದ್ರ ,ಕೋಗಳಿ ಮಂಜುನಾಥ್, ನರಸಿಂಹನಗಿರಿ ವೆಂಕಟೇಶ್, ಎಸ್ ಕೊಡ ದಪ್ಪ, ಉಜ್ಜಯಿನಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪರಸಪ್ಪ, ಉಜಿನಿ ಪೀಠದ ವ್ಯವಸ್ಥಾಪಕರಾದ ವೀರೇಶ್ ಮರಳುಸಿದ್ದಪ್ಪ ಸೇರಿದಂತೆ ಸಾರ್ವಜನಿಕರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು..
ವರದಿ.ಡಿ.ಎಂ.ಈಶ್ವರಪ್ಪ ಸಿದ್ದಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030