ಕೂಡ್ಲಿಗಿ:ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ-ಮಾಜಿ ಸಚಿವ ಸಂತೋಷಲಾಡ್…!!!

Listen to this article

ಕೂಡ್ಲಿಗಿ:ಆಶಾ ಕಾರ್ಯಕರ್ತೆಯರ ಸೇವೆ ಅನನ್ಯ-ಮಾಜಿ ಸಚಿವ ಸಂತೋಷಲಾಡ್

– ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ, ತಾಲೂಕಿನ ಸಮಸ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ತಾಲೂಕಿನ ಸಮಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಮಾತನಾಡಿ,ಆಶಾ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯವಾದದ್ದು. ಅವರ ಸೇವೆ ಬೆಲೆ ಕಟ್ಟಲಾಗದಂತಹದ್ದಾಗಿದ್ದು, ಈ ಮೂಲಕ ಅವರ ಸಮಾಜ ಸೇವಾ ಮನೋಭಾವವನ್ನು ಗೌರವಿಸುತ್ತಿದೆ. ಈ ಮೂಲಕ ಅವರ ಸೇವೆಯಲ್ಲಿ ಉತ್ತೇಜಿಸುವ ಸಣ್ಣ ಪ್ರಯತ್ನ ಇದಾಗಿದೆ ಎಂದರು.
ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು, ಇವರು ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಶ್ರಮಿಸಿರುತ್ತಾರೆ. ಅವರಿಗೆ ಸನ್ಮಾನ ಮಾಡಬೇಕೆಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಕೂಡ್ಲಿಗಿ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಗುತ್ತಿದೆ ಎಂದರು.ಕೆಪಿಸಿಸಿ ಸದಸ್ಯ ಲೋಕೇಶ ವಿ ನಾಯಕ ಹಾಗೂ ಗುಜ್ಜಲ ರಘಾವೇಂದ್ರ,ಮುಂಡ್ರಗಿ ನಾಗರಾಜ ಮುಂತಾದವರು ಮಾತನಾಡಿದರು. ಅನೆಕ ಗಣ್ಯ ಮಾನ್ಯರು ವಿವಿದ ಇಲಾಖೆಗಳ ಅಧಿಕಾರಿಗಳು,ಪಟ್ಟಣ ಪಂಚಾಯ್ತಿ ಸದಸ್ಯರು, ಜನಪ್ರತಿನಿಧಿಗಳು ವಿವಿದ ಸಂಘಟನೆಗಳ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.ತಾಲೂಕಿನ ಸಮಸ್ತ ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕರಿಸಿದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend