ಬೆಳ್ಳಿಗಟ್ಟ ಗ್ರಾ.ಪಂ ಅಧ್ಯಕ್ಷೆ ರಾಧಮ್ಮ ರಾಕೇಶ್ ನೇತೃತ್ವದಲ್ಲಿ ವಿಶೇಷ ಗ್ರಾಮ ಸಭೆ.!
ವಿಜಯನಗರ: ಕೂಡ್ಲಿಗಿ ತಾಲೂಕಿನ ಬೆಳ್ಳಿಗಟ್ಟ ಗ್ರಾಮ ಪಂಚಾಯತಿಯಲ್ಲಿ ಇಂದು2021-22 ನೇ ಸಾಲಿನ ಡಾ ಬಿ.ಆರ್ ಅಂಬೇಡ್ಕರ್ ಹಾಗೂ ಬಸವ ವಸತಿ ಫಲಾನುಭವಿಗಳ ಆಯ್ಕೆ ಮಾಡುವ ಬಗ್ಗೆ ಹಾಗೂ 2022-23 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕ್ರಿಯಾಯೋಜನೆ ತಯಾರಿಸುವ ಬಗ್ಗೆ ವಿಶೇಷ ಗ್ರಾಮ ಸಭೆ ಕರೆಯಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ರಾಧಮ್ಮ ರಾಕೇಶ್ ಅವರ ವಹಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ವಾಮದೇವ ಅವರು ಮನೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಿದರು. ಅನೇಕ ಪೂರಕ ಮನೆಗಳ ಮಂಜೂರಾತಿ ಬಗ್ಗೆ ಆನ್ಲೈನ್ ಲಿಸ್ಟ್ ಸಭೆಯಲ್ಲಿ ಓದಲಾಯಿತು. ಮಂಜೂರಾದ ಮನೆಗಳನ್ನು ವಿಂಗಡಣೆಗಳನ್ನು ಮಾಡಲಾಯಿತು. 26 ಮನೆಗಳು ಸಾಮಾನ್ಯ, ಮೂರು ಪರಿಶಿಷ್ಟ ಪಂಗಡ, ಏಳು ಪರಿಶಿಷ್ಟ ಜಾತಿ, ಒಂದು ಅಲ್ಪಸಂಖ್ಯಾತರ, ಒಟ್ಟು 37 ಮನೆಗಳ ಬಗ್ಗೆ ಗ್ರಾಮ ಸಭೆಯಲ್ಲಿ ಮನೆಗಳನ್ನು ಆಯ್ಕೆಮಾಡಲಾಯಿತು. ನಂತರ ಪ್ರಸ್ತುತ 22 23 ನೇ ಸಾಲಿನ ಉದ್ಯೋಗ ಖಾತರಿ ಯೋಜನೆ ಅನುದಾನದ ಬಗ್ಗೆ ತಿಳಿಸಿಕೊಡಲಾಯಿತು. ಬದು ನಿರ್ಮಾಣ ಎರೆಹುಳು ರೊಟ್ಟಿ, ಕೃಷಿಹೊಂಡ, ಸಿಸಿ ರಸ್ತೆ, ಇತ್ಯಾದಿ ಕಾಮಗಾರಿಗಳ ಬಗ್ಗೆ
ಪಿಡಿಒ ಬಸವರಾಜ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶ್ವೇತ ಕೃಷ್ಣಪ್ಪ, ಗ್ರಾ.ಪಂ ಸರ್ವ ಸದಸ್ಯರುಗಳು, ಗ್ರಾ.ಪಂ ಸಿಬ್ಬಂದಿ ವರ್ಗದವರು ಹಾಗೂ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು..
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030