ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲನೆ…!!!

Listen to this article

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ.
ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲನೆ
ಕಾನಹೊಸಹಳ್ಳಿ ಕೆರೆಯ ಅಂಗಳದಲ್ಲಿ ಹೊಸಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಿಂದ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿಬಿ ನಿಂಗಪ್ಪ ಮತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಬೋರಣ್ಣ ನವರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿನೀಡಿ ಕಾಮಗಾರಿ ಪರಿಶೀಲನೆ ಮಾಡಿದರು. ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿಬಿ ನಿಂಗಪ್ಪ ಅವರು ಮಾತನಾಡಿ ಕೋವಿಡ್ 19 ರೂಪಾಂತರಿ ವೈರಾಸ್ ವ್ಯಾಪಕವಾಗಿ ಹರಡುವುದರಿಂದ ಪ್ರತಿಯೊಬ್ಬ ಕೂಲಿಕಾರ್ಮಿಕರು ಕೋವಿಡ್ 19 ರ ಮುಂಜಾಗೃತಾ ಕ್ರಮಗಳನ್ನು ಪಾಲಿಸತಕ್ಕದ್ದು. ಯಾರಾದರೂ ಕೊರೋನೋ ಲಸಿಕೆಯನ್ನು ಹಾಕಿಸಿಕೊಳ್ಳುವವರು ಇದ್ದರೆ ಸಂಬಂಧಪಟ್ಟ ಆಸ್ಪತ್ರೆಗೆ ಹೋಗಿ ಲಸಿಕೆಯನ್ನು ಪಡೆದು ಬರಬೇಕು. ತಮ್ಮ ಜೀವ ಜೀವನ ನಿಮ್ಮ ನಿಮ್ಮ ಕೈಯಲ್ಲಿದೆ. ಹಾಗೂ ಕೂಲಿ ಕಾರ್ಮಿಕರಿಗೆ ಗುಣಾತ್ಮಕ ಹಾಗೂ ಪರಿಮಾಣಾತ್ಮಕ ವಾಗಿ ಕೆಲಸ ಮಾಡುವಂತೆ ಕೆಲಸ ಮಾಡಿ ಕೂಲಿ ಕಾರ್ಮಿಕರಿಗೆ ತೋರಿಸಿದರು.. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್. ಸಿಬ್ಬಂದಿಗಳಾದ ಡಿಈಓ ಅನಿಲ್ ಕುಮಾರ್. ಬಿ ಎಫ್ ಟಿ.ದಾನೇಶ್.ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ಕೂಲಿ ಕಾರ್ಮಿಕರು ಇತರರಿದ್ದರು..

ವರದಿ.ಡಿ. ಎಂ.ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend